Home ಟಾಪ್ ಸುದ್ದಿಗಳು ಶಿವಮೊಗ್ಗ ಘಟನೆ: ಮತ್ತೆ ಪ್ರಚೋದನಾಕಾರಿ ಹೇಳಿಕೆ ನೀಡಿದ ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ ಘಟನೆ: ಮತ್ತೆ ಪ್ರಚೋದನಾಕಾರಿ ಹೇಳಿಕೆ ನೀಡಿದ ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಮುಸ್ಲಿಮ್ ಗೂಂಡಾಗಳ ಉಪಟಳ, ಹದ್ದು ಮೀರಿದ ವರ್ತನೆ ಹೆಚ್ಚಾಗುತ್ತಿದೆ. ಗೂಂಡಾ ಮುಸ್ಲಿಮರ ಮಾನಸಿಕತೆ ಇನ್ನೂ ಕಡಿಮೆಯಾಗಿಲ್ಲ. ಮುಸ್ಲಿಮ್ ಗೂಂಡಾಗಳ ಬಗ್ಗೆ ಮುಸ್ಲಿಮ್ ಮುಖಂಡರು ಗಮನ ಹರಿಸಬೇಕು. ಹಿಂದೂ ಸಮುದಾಯ ಆಕ್ರೋಶಗೊಂಡರೆ ಹೇಗೆಂಬ ಭಯ ಶುರುವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಮತ್ತೆ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊದಿಗೆ ಮಾತನಾಡಿದ ಅವರು, ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಆರೋಪಿಗಳನ್ನು ಬಂಧಿಸಲಾಗಿದ್ದು, ಹರ್ಷನ ಕೊಲೆ ಹಿಂದೆ ಯಾರಿದ್ದಾರೆಂದು ಪತ್ತೆ ಹಚ್ಚಲಾಗುತ್ತಿದೆ. ಯಾರು ಷಡ್ಯಂತ್ರ ನಡೆಸಿದ್ದಾರೆ ಎಂದು ತನಿಖೆಯ ನಂತರ ಬಯಲಾಗಲಿದೆ ಎಂದು  ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕರಿಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ಲ, ಹಿಜಾಬ್ ವಿವಾದದ ದಿಕ್ಕು ತಪ್ಪಿಸಲು ಮೇಕೆದಾಟು ಪಾದಯಾತ್ರೆ ಮಾಡಿದ್ದಾರೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ.

Join Whatsapp
Exit mobile version