ಕೆಐಎಡಿಬಿ ನಿವೇಶನ ಅಕ್ರಮ ಆರೋಪಕ್ಕೆ ಸ್ಪಷ್ಟನೆ ನೀಡಿದ ಸಚಿವ ಎಂಬಿ ಪಾಟೀಲ್

Prasthutha|

ಬೆಂಗಳೂರು: ನನ್ನ ವಿರುದ್ಧ ಈಗ ನೀಡಿರುವ ದೂರು ತುಂಬಾ ಹಳೆಯದು. ದಿನಾಂಕ ಬದಲಿಸಿ ನನ್ನ ವಿರುದ್ಧ ಈಗ ಮತ್ತೊಂದು ದೂರು ನೀಡಿದ್ದಾರೆ. ಈ ಸಂಬಂಧ ಈ ಹಿಂದೆಯೇ ರಾಜ್ಯಪಾಲರಿಗೆ ಉತ್ತರ ನೀಡಿದ್ದೇನೆ ಎಂದು ಕೈಗಾರಿಕಾ ಇಲಾಖೆ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

- Advertisement -

ಕೆಐಎಡಿಬಿ ಮೂಲೆ ನಿವೇಶನ ಹಂಚಿಕೆಯಲ್ಲಿ ಅಕ್ರಮವೆಸಗಿದ ಆರೋಪ ಹಿನ್ನೆಲೆ ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಲೆ ನಿವೇಶನ ಹಂಚಿಕೆಯಲ್ಲಿ ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಹೇಳಿದ್ದಾರೆ.

ನಾನು ಕೈಗಾರಿಕೆ ಸಚಿವರಾದ ಮೇಲೆ ಯಾವುದೇ ಬದಲಾವಣೆ ಮಾಡಿಲ್ಲ. ಎಲ್ಲಾ ನಿಯಮಗಳನ್ನು ಈ ಹಿಂದಿನ ಸರ್ಕಾರವೇ ರೂಪಿಸಿತ್ತು. ನಿಯಮದಂತೆ ಕೆಐಎಡಿಬಿ ಮೂಲೆ ನಿವೇಶನ ಹಂಚಿಕೆ ಮಾಡಲಾಗಿದೆ. ರಾಜ್ಯಪಾಲರು ನೋಟಿಸ್ ನೀಡಿದರೆ ನಾನು ಉತ್ತರ ಕೊಡುತ್ತೇನೆ ಎಂದಿದ್ದಾರೆ.



Join Whatsapp