Home ಟಾಪ್ ಸುದ್ದಿಗಳು ಕೆಐಎಡಿಬಿ ನಿವೇಶನ ಅಕ್ರಮ ಆರೋಪಕ್ಕೆ ಸ್ಪಷ್ಟನೆ ನೀಡಿದ ಸಚಿವ ಎಂಬಿ ಪಾಟೀಲ್

ಕೆಐಎಡಿಬಿ ನಿವೇಶನ ಅಕ್ರಮ ಆರೋಪಕ್ಕೆ ಸ್ಪಷ್ಟನೆ ನೀಡಿದ ಸಚಿವ ಎಂಬಿ ಪಾಟೀಲ್

ಬೆಂಗಳೂರು: ನನ್ನ ವಿರುದ್ಧ ಈಗ ನೀಡಿರುವ ದೂರು ತುಂಬಾ ಹಳೆಯದು. ದಿನಾಂಕ ಬದಲಿಸಿ ನನ್ನ ವಿರುದ್ಧ ಈಗ ಮತ್ತೊಂದು ದೂರು ನೀಡಿದ್ದಾರೆ. ಈ ಸಂಬಂಧ ಈ ಹಿಂದೆಯೇ ರಾಜ್ಯಪಾಲರಿಗೆ ಉತ್ತರ ನೀಡಿದ್ದೇನೆ ಎಂದು ಕೈಗಾರಿಕಾ ಇಲಾಖೆ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಕೆಐಎಡಿಬಿ ಮೂಲೆ ನಿವೇಶನ ಹಂಚಿಕೆಯಲ್ಲಿ ಅಕ್ರಮವೆಸಗಿದ ಆರೋಪ ಹಿನ್ನೆಲೆ ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಲೆ ನಿವೇಶನ ಹಂಚಿಕೆಯಲ್ಲಿ ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಹೇಳಿದ್ದಾರೆ.

ನಾನು ಕೈಗಾರಿಕೆ ಸಚಿವರಾದ ಮೇಲೆ ಯಾವುದೇ ಬದಲಾವಣೆ ಮಾಡಿಲ್ಲ. ಎಲ್ಲಾ ನಿಯಮಗಳನ್ನು ಈ ಹಿಂದಿನ ಸರ್ಕಾರವೇ ರೂಪಿಸಿತ್ತು. ನಿಯಮದಂತೆ ಕೆಐಎಡಿಬಿ ಮೂಲೆ ನಿವೇಶನ ಹಂಚಿಕೆ ಮಾಡಲಾಗಿದೆ. ರಾಜ್ಯಪಾಲರು ನೋಟಿಸ್ ನೀಡಿದರೆ ನಾನು ಉತ್ತರ ಕೊಡುತ್ತೇನೆ ಎಂದಿದ್ದಾರೆ.

Join Whatsapp
Exit mobile version