ಕಮೀಷನ್ ಸಾಬೀತುಪಡಿಸದಿದ್ದರೆ ಶಿಕ್ಷೆ ಖಚಿತ: ಕೆಂಪಣ್ಣಗೆ ಎಚ್ಚರಿಕೆ ನೀಡಿದ ಸಚಿವ ಮುನಿರತ್ನ

Prasthutha|

- Advertisement -

ಮಾಲೂರು (ಕೋಲಾರ): ಕಮೀಷನ್ ಸಾಬೀತುಪಡಿಸದಿದ್ದರೆ ಶಿಕ್ಷೆ ಖಚಿತ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣಗೆ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಎಚ್ಚರಿಕೆ ನೀಡಿದ್ದಾರೆ.

ಭಾನುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿರತ್ನ, ಕಮಿಷನ್‌ ಆರೋಪ ಮಾಡಿರುವ ಕೆಂಪಣ್ಣ ನ್ಯಾಯಾಲಯಕ್ಕೆ ದಾಖಲೆ ಒದಗಿಸಿ ಆರೋಪ ಸಾಬೀತುಪಡಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಅವರಿಗೆ ಸಂಕಷ್ಟ ಎದುರಾಗಲಿದ್ದು, ಎರಡು ವರ್ಷ ಶಿಕ್ಷೆ ಅನುಭವಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

- Advertisement -

‘ದಾಖಲೆ ಒದಗಿಸದ ಕಾರಣ ಅವರಿಗೆ ನ್ಯಾಯಾಲಯದಿಂದ ಸಮನ್ಸ್ ಬಂತು, ಸಮನ್ಸ್ ಬಂದೂ ದಾಖಲೆ ಕೊಡದಿದ್ದರಿಂದ ವಾರಂಟ್‌ ಬಂತು. ಆರೋಪ ಮಾಡುವುದು ಸುಲಭ. ಬಳಿಕ ಅದನ್ನು ಜೀರ್ಣಿಸಿಕೊಳ್ಳುವ ಶಕ್ತಿಯೂ ಇರಬೇಕು. ಇದು ಇಷ್ಟಕ್ಕೆ ನಿಲ್ಲುವುದಿಲ್ಲ, ಕಾನೂನು ಚೌಕಟ್ಟಿನಲ್ಲಿ ಏನು ಕ್ರಮ ಕೈಗೊಳ್ಳಬೇಕು ಅದೆಲ್ಲಾ ಮಾಡುವೆ’ ಎಂದು ಅವರು ಹೇಳಿದರು.

‘ಶೇ 40ರಷ್ಟು ಕಮಿಷನ್‌ ಯಾರು ಕೇಳಿದ್ದಾರೆ? ರಾಜರಾಜೇಶ್ವರಿ ಕ್ಷೇತ್ರದಲ್ಲಿ ₹10 ಸಾವಿರ ಕೋಟಿ ಎಲ್ಲಿ ಖರ್ಚು ಆಗಿದೆ ತೋರಿಸಬೇಕು. ದಾಖಲೆ ತೋರಿಸುವವರೆಗೂ ನಾನು ಬಿಡುವುದಿಲ್ಲ. ಆದಷ್ಟು ಬೇಗ ಈ ಪ್ರಕರಣ ಮುಗಿಸಲು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವೆ. ಖಂಡಿತವಾಗಲೂ ಹೇಳುತ್ತಿರುವೆ ದಾಖಲೆ ಕೊಡದಿದ್ದರೆ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಮುನಿರತ್ನ ತಿಳಿಸಿದ್ದಾರೆ

Join Whatsapp