ಮೊಳಕಾಲ್ಮುರು ಕ್ಷೇತ್ರದಿಂದ ಮತ್ತೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಸಚಿವ ಶ್ರೀರಾಮುಲು

Prasthutha|

ಚಿತ್ರದುರ್ಗ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಮೊಳಕಾಲ್ಮುರು ಕ್ಷೇತ್ರದಿಂದ ಸ್ಪರ್ಧಿಸಲಿದ್ದೇನೆ ಎಂದು ಸಚಿವ ಬಿ. ಶ್ರೀರಾಮುಲು ಘೋಷಣೆ ಮಾಡಿದ್ದಾರೆ.

ಮೊಳಕಾಲ್ಮುರು ಮಂಡಲ ಬಿಜೆಪಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಗಳನ್ನು ಕೈಗೊಂಡಿದ್ದು, ಕೆಲ ಕಾರ್ಯಗಳು ಬಾಕಿ ಇವೆ. ಅವುಗಳನ್ನು ಪೂರ್ಣಗೊಳಿಸಲು ಇನ್ನೊಂದು ಅವಕಾಶ ನೀಡಬೇಕು’ ಎಂದು ಅವರು ಮನವಿ ಮಾಡಿದರು.

- Advertisement -


‘ನಾಯಕ ಸಮುದಾಯಕ್ಕೆ ಮೀಸಲಾತಿ ಹೆಚ್ಚಳದ ಬೇಡಿಕೆ 40 ವರ್ಷಗಳದ್ದಾಗಿತ್ತು. ಬೇಡಿಕೆ ಈಡೇರಿಕೆಗಾಗಿ ಹಲವರು ಶ್ರಮಿಸಿದ್ದಾರೆ. ಆದರೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದಿದೆ. ಇದರಿಂದ ಪರಿಶಿಷ್ಟ ಜಾತಿ, ಪಂಗಡಗಳಿಗೆ ರಾಜಕೀಯ, ಶಿಕ್ಷಣ, ಉದ್ಯೋಗ ಕ್ಷೇತ್ರದಲ್ಲಿ ವಿಫುಲ ಅವಕಾಶ ಸಿಗಲಿದೆ. ಇದರ ಫಲವನ್ನು ಮುಂದಿನ ಪೀಳಿಗೆ ಸ್ಮರಿಸಲಿದೆ’ ಎಂದು ಹೇಳಿದರು.

Join Whatsapp