ಸಿನಿಮಾ ಲೋಕಕ್ಕೆ ಎಂಟ್ರಿ ಕೊಟ್ಟ ಸಚಿವ ಡಾ.ಕೆ. ಸುಧಾಕರ್

Prasthutha|

ಬೆಂಗಳೂರು: ಸಿನೆಮಾ ಲೋಕಕ್ಕೆ ಪ್ರವೇಶಿಸಿರುವ ವೈದ್ಯಕೀಯ ಸಚಿವ ಸಚಿವ ಡಾ.ಕೆ ಸುಧಾಕರ್ ಸ್ಯಾಂಡಲ್ ವುಡ್ ಅಂಗಳಕ್ಕೆ ಎಂಟ್ರಿ ಪಡೆದಿದ್ದಾರೆ. ನೈಜ ಘಟಾನಧರಿತ ಚಿತ್ರವೊಂದರಲ್ಲಿ ಬಣ್ಣ ಹಚ್ಚಿರುವ ಸುಧಾಕರ್ ‘ತನುಜಾ’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

- Advertisement -

ಕೋವಿಡ್ ಸಂದರ್ಭದಲ್ಲಿ ತನುಜಾ ಎನ್ನುವ ವಿದ್ಯಾರ್ಥಿನಿಯೋರ್ವಳು ಕೋವಿಡ್ ಸಂದರ್ಭದಲ್ಲಿ ಪರೀಕ್ಷೆ ಬರೆಯಲಾಗದೇ ಸಹಾಯ ಕೋರಿದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯಡಿಯೂರಪ್ಪ , ಸಚಿವ ಡಾ.ಕೆ ಸುಧಾಕರ್, ಇನ್ನಿತರ ಸಹಾಯದಿಂದ ಪರೀಕ್ಷೆ ಬರೆದು ವೈದ್ಯಕೀಯ ಸೀಟು ಪಡೆದಿದ್ದಳು. ಇದೇ ಘಟನೆಯನ್ನು ಆಧರಿಸಿ ಸಿನಿಮಾ ನಿರ್ಮಿಸಲಾಗಿದ್ದು, ರಾಜ್ಯಪ್ರಶಸ್ತಿ ವಿಜೇತ ಹರೀಶ್ ಎಂ.ಡಿ ಹಳ್ಳಿ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಇಂದು ಸುಧಾಕರ್ ತಮ್ಮ ಪಾತ್ರಕ್ಕೆ ಬಣ್ಣ ಹಚ್ಚಿದ್ದು, ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದಾರೆ. ಅಲ್ಲದೇ ಇದೇ ಚಿತ್ರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಕೂಡ ನಟಿಸುತ್ತಿದ್ದು; ಶಿವಮೊಗ್ಗ ಸೇರಿದಂತೆ ಬೆಂಗಳೂರಿನ ಹಲವೆಡೆ ಚಿತ್ರೀಕರಣಗೊಂಡಿದೆ.



Join Whatsapp