ಸಕಲ ಸರ್ಕಾರಿ ಗೌರವದೊಂದಿಗೆ ಸಚಿವ ಉಮೇಶ್ ಕತ್ತಿ ಅಂತ್ಯಕ್ರಿಯೆ

Prasthutha|

ಬೆಳಗಾವಿ: ಸಕಲ‌ ಸರ್ಕಾರಿ ಗೌರವದೊಂದಿಗೆ ಜಿಲ್ಲೆಯ ಬೆಲ್ಲದಬಾಗೇವಾಡಿ ಗ್ರಾಮದ ಸಚಿವ ಉಮೇಶ್ ಕತ್ತಿಯವರ ಸ್ವ ಗೃಹದ ತೋಟದಲ್ಲಿ ಅವರ ಅಂತ್ಯಕ್ರಿಯೆ ಬುಧವಾರ ರಾತ್ರಿ 10 ಗಂಟೆಗೆ ನಡೆಯಿತು.

- Advertisement -

ತಂದೆ ವಿಶ್ವನಾಥ ಕತ್ತಿ ಅವರ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ನಡೆದಿದ್ದು, ಹೃದಯಾಘಾತದಿಂದ ಮೃತರಾಗಿದ್ದ ಸಚಿವ ಉಮೇಶ ಕತ್ತಿಯವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಈ ವೇಳೆ ಕುಟುಂಬಸ್ಥರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು.

ಪಕ್ಷಾತೀತವಾಗಿ ಎಲ್ಲ ಪಕ್ಷಗಳ ನಾಯಕರು, ಸಾವಿರಾರು ಜನರು ಉಮೇಶ ಕತ್ತಿಯವರ ಅಂತಿಮ ದರ್ಶನ ಪಡೆದುಕೊಂಡಿದ್ದು, ಇದಕ್ಕೂ ಮುನ್ನ, ಸಿಎಂ ಬಸವರಾಜ ಬೊಮ್ಮಾಯಿ ಉಮೇಶ್‌ ಕತ್ತಿಯವರ ಮೃತದೇಹದ ಮೇಲೆ ಹೊದಿಸಿದ್ದ ರಾಷ್ಟ್ರಧ್ವಜವನ್ನು ಅವರ ಪತ್ನಿಗೆ ಹಸ್ತಾಂತರ ಮಾಡಲಾಗಿದೆ. 

Join Whatsapp