Home ಟಾಪ್ ಸುದ್ದಿಗಳು ಸಚಿವ ಉಮೇಶ್ ಕತ್ತಿ ನಿಧನ: 3ನೇ ಬಾರಿಗೆ ಬಿಜೆಪಿ ಜನೋತ್ಸವ ಕಾರ್ಯಕ್ರಮ ಮುದೂಡಿಕೆ

ಸಚಿವ ಉಮೇಶ್ ಕತ್ತಿ ನಿಧನ: 3ನೇ ಬಾರಿಗೆ ಬಿಜೆಪಿ ಜನೋತ್ಸವ ಕಾರ್ಯಕ್ರಮ ಮುದೂಡಿಕೆ

ಬೆಂಗಳೂರು: ಸಚಿವ ಉಮೇಶ್ ಕತ್ತಿ ನಿಧನ ಹಿನ್ನೆಲೆ ಬಿಜೆಪಿ ಜನೋತ್ಸವ ಕಾರ್ಯಕ್ರಮ ಮುದೂಡಲಾಗಿದೆ.

ರಾಜ್ಯ ಬಿಜೆಪಿ ಸರ್ಕಾರದ ಮೂರು ವರ್ಷ ಹಾಗೂ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಬಿಜೆಪಿ ಜನೋತ್ಸವ ಕಾರ್ಯಕ್ರಮ ಒಂದಲ್ಲ ಒಂದು ಕಾರಣದಿಂದ ಮುಂದೂಡಿಕೆಯಾಗುತ್ತಿದೆ. ಇದೀಗ ಆಹಾರ ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ ನಿಧನದಿಂದ ದೊಡ್ಡಬಳ್ಳಾಪುರದಲ್ಲಿ ನಾಳೆ(ಸೆ.08) ಆಯೋಜಿಸಿದ್ದ ಅತೀ ದೊಡ್ಡ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಕತ್ತಿ ನಿಧನಕ್ಕೆ ಆರಂಭದಲ್ಲಿ ಒಂದು ದಿನ ಶೋಕಾಚಾರಣೆ ಘೋಷಿಸಲಾಗಿತ್ತು. ಸರ್ಕಾರ ಜನೋತ್ಸವ ಕಾರ್ಯಕ್ರಮ ನಡೆಸುವ ಉದ್ದೇಶಕ್ಕಾಗಿ ಹೀಗೆ ಮಾಡಿದೆ ಎಂದು ಆಕ್ಷೇಪ ವ್ಯಕ್ತವಾಗಿತ್ತು. ಬಳಿಕ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಿಸಲಾಗಿದೆ. ಹೀಗಾಗಿ ಮೂರು ದಿನ ಯಾವುದೇ ಸರ್ಕಾರಿ ಕಾರ್ಯಕ್ರಮಗಳು ನಡೆಯುವುದಿಲ್ಲ. ಪರಿಣಾಮವಾಗಿ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಸೆಪ್ಟೆಂಬರ್ 11ಕ್ಕೆ ಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಹೇಳಿದ್ದಾರೆ.

Join Whatsapp
Exit mobile version