Home ಟಾಪ್ ಸುದ್ದಿಗಳು ನಟ ಅನಂತ್‌ ನಾಗ್‌ಗೆ 75ನೇ ಹುಟ್ಟುಹಬ್ಬ : ಮಂಗಳೂರಿನಲ್ಲಿ ಭೇಟಿಯಾಗಿ ಶುಭ ಹಾರೈಸಿದ ಸಚಿವ ಜಮೀರ್...

ನಟ ಅನಂತ್‌ ನಾಗ್‌ಗೆ 75ನೇ ಹುಟ್ಟುಹಬ್ಬ : ಮಂಗಳೂರಿನಲ್ಲಿ ಭೇಟಿಯಾಗಿ ಶುಭ ಹಾರೈಸಿದ ಸಚಿವ ಜಮೀರ್ ಅಹಮದ್ ಖಾನ್

ಮಂಗಳೂರು: ಇಂದು ಮಂಗಳೂರಿಗೆ ಬಂದಿರುವ ವಸತಿ, ವಕ್ಪ್, ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಜಮೀರ್ ಅಹಮದ್ ಖಾನ್ ಖಾಸಗಿ ಹೋಟೆಲ್‌ನಲ್ಲಿ 75ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಟ ಅನಂತ್ ನಾಗ್ ಅವರನ್ನು ಭೇಟಿಯಾಗಿ‌ ಶುಭ ಹಾರೈಸಿ ಉಭಯ ಕುಶಲೋಪರಿ ನಡೆಸಿದರು.

ಈ ವೇಳೆ ಪರಿಷರ್ ಸದಸ್ಯರಾದ ಮಂಜುನಾಥ್ ಭಂಡಾರಿ, ಹರೀಶ್ ಕುಮಾರ್ ಮತ್ತು ಸ್ಪೀಕರ್ ಯುಟಿ ಖಾದರ್ ಅವರ ಸಹೋದರ ಯುಟಿ ಇಫ್ತಿಕಾರ್ ಉಪಸ್ಥಿತರಿದ್ದರು.

ಜಮೀರ್ ಅಹಮದ್ ಖಾನ್ ಅವರು ನಾಳೆ (ಸೆ.5) ಹಾಗೂ 6ರಂದು ದ.ಕ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಅವರು ಇಂದು ಸಂಜೆ 4.10ಕ್ಕೆ ಅವರು ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು. ನಗರದ ಸಕ್ರ್ಯೂಟ್ ಹೌಸ್ ಗೆ ತೆರಳಿ ವಾಸ್ತವ್ಯ ಹೂಡುವರು.

ನಾಳೆ (ಸೆ.5ರ ಮಂಗಳವಾರ) ಬೆಳಿಗ್ಗೆ 9 ಗಂಟೆಗೆ ನಗರದಲ್ಲಿ ಹಾಜಿ ಯಾನಪ್ಪಯ್ಯ ಅಬ್ದುಲಾ ಖುನ್ನಿ ಅವರು ಆಯೋಜಿಸಿರುವ ಅಲ್ಪಸಂಖ್ಯಾತರ ಸಮುದಾಯದ ಮುಖಂಡರೊಡನೆ ಚರ್ಚೆ ನಡೆಸುವರು. ನಂತರ ನಗರದ ಟೌನ್ ಹಾಲ್‍ನಲ್ಲಿ ಸಾರ್ವಜನಿಕರಿಂದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12.30ಕ್ಕೆ ಪುತ್ತೂರಿನ ತಾಲೂಕಿನ ಮಿತ್ತೂರು ಇಡ್ಕಿದು ಗ್ರಾಮದ ದಾರುಲ್ ಇರ್ಷಾದ್ ಆವರಣದಲ್ಲಿ ಪ್ರಧಾನ ಮಂತ್ರಿ ಜನ ವಿಕಾಸ ಯೋಜನೆಯಡಿ ಶಾಲಾ ಕಟ್ಟಡದ ಉದ್ಘಾಟನೆಯಲ್ಲಿ ಭಾಗವಹಿಸುವರು. ಅಲ್ಲಿಂದ ಮಧ್ಯಾಹ್ನ 1.30ಕ್ಕೆ ಪುತ್ತೂರು ತಾಲೂಕಿನ ಮಾಣಿಗೆ ತೆರಳುವರು. ನಂತರ 2.30ಕ್ಕೆ ಮಂಗಳೂರಿಗೆ ಆಗಮಿಸುವರು. ಮಧ್ಯಾಹ್ನ 3.30ಕ್ಕೆ ನಗರದ ಹಜ್ ಭವನದ ಕುರಿತು ಪೌರಾಡಳಿತ ಮತ್ತು ಹಜ್ ಸಚಿವರು ಹಾಗೂ ಅಲ್ಪಸಂಖ್ಯಾತರ ಮುಖಂಡರೊಡನೆ ಚರ್ಚೆ ನಡೆಸುವರು. ಅಲ್ಲಿಂದ ಸಂಜೆ 6 ಗಂಟೆಗೆ ಉಳ್ಳಾಲದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಯ ಶಂಕು ಸ್ಥಾಪನೆ ನೆರವೇರಿಸುವರು. 7 ಗಂಟೆಗೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡುವರು. ನಂತರ ರಾತ್ರಿ 8 ಗಂಟೆಗೆ ನಗರದ ಸಕ್ರ್ಯೂಟ್ ಹೌಸ್‍ನಲ್ಲಿ ವಾಸ್ತವ್ಯ ಮಾಡುವರು.

ಸೆ.6ರ ಬುಧವಾರ ಬೆಳಿಗ್ಗೆ 10 ಗಂಟೆಗೆ ಕಣಚೂರು ಮೆಡಿಕಲ್ ಕಾಲೇಜ್ ಕ್ಯಾಂಪಸ್ ನಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮದ ಉದ್ಘಾಟನೆ ಮಾಡುವರು. ನಂತರ ಮಧ್ಯಾಹ್ನ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆÀ ಸಭೆ ನಡೆಸುವರು. ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು. ಸಂಜೆ 4.25ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

Join Whatsapp
Exit mobile version