ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಸಚಿವರ ದಿಢೀರ್ ಭೇಟಿ

Prasthutha|

►ಅರ್ಹ ಫಲಾನುಭವಿಗಳಿಗೆ ಸೌಲಭ್ಯ ವಿತರಣೆಗೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

- Advertisement -

ಬೆಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಂದು ದಿಢೀರ್ ಭೇಟಿ ನೀಡಿದರು.

ಇಲಾಖೆಯ ವಿವಿಧ ಅಭಿವೃದ್ಧಿ ನಿಗಮಗಳ ಕಾರ್ಯವೈಖರಿಯನ್ನು ಖುದ್ಧು ಪರಿಶೀಲಿಸುವ ಹಾಗೂ ಮತ್ತಷ್ಟು ಚುರುಕುಗೊಳಿಸುವ ಉದ್ದೇಶದಿಂದ ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ಚಿಕ್ಕಗೋಪುರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಶನಿವಾರ ಬೆಳಿಗ್ಗೆ ದಿಢೀರ್ ಭೇಟಿ ನೀಡಿದ ಸಚಿವರು, ಅಧಿಕಾರಿ ಸಿಬ್ಬಂದಿ ಹಾಜರಾತಿಯಿಂದ ಹಿಡಿದು ವಿವಿಧ ವಿಷಯಗಳ ಪರಿಶೀಲನೆ ನಡೆಸಿ ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಾರ್ಯವೈಖರಿ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.

- Advertisement -

ಭೂಒಡೆತನ ಯೋಜನೆಯಲ್ಲಿನ ಗೊಂದಲ ಬಗೆಹರಿಸುವ ಬಗ್ಗೆ ಹಾಗೂ ಗಂಗಾ ಕಲ್ಯಾಣ ಯೋಜನೆಯ ವಿದ್ಯುದ್ದೀಕರಣದ ಕುರಿತು ಕ್ರಮ ವಹಿಸುವ ಬಗ್ಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ  ಕೆ.ಎ.ಸುರೇಶ್ ಕುಮಾರ್ ಅವರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ.ಕೆ.ರಾಕೇಶ್ ಕುಮಾರ್, ಸಚಿವರ ಆಪ್ತ ಕಾರ್ಯದರ್ಶಿ ಡಾ.ಉದಯಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Join Whatsapp