ಪಕ್ಷದಲ್ಲಿರುವ ಅಲ್ಪಸಂಖ್ಯಾತ ಮೋರ್ಚಾ ವಿಭಾಗವನ್ನು ವಿಸರ್ಜಿಸಬೇಕು: ಬಿಜೆಪಿ ನಾಯಕ ಸುವೆಂದು ಅಧಿಕಾರಿ

Prasthutha|

►’ಮೋದಿಯವರ ʻʻಸಬ್ಕಾ ಸಾಥ್, ಸಬ್ಕಾ ವಿಕಾಸ್ʼʼ ಘೋಷಣೆ ನಿಲ್ಲಿಸುವ ಸಮಯ ಬಂದಿದೆ

- Advertisement -


ಕೋಲ್ಕತ್ತಾ: ಪಕ್ಷದಲ್ಲಿರುವ ಅಲ್ಪಸಂಖ್ಯಾತ ವಿಭಾಗವನ್ನು ವಿಸರ್ಜಿಸಬೇಕು, ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ʻʻಸಬ್ಕಾ ಸಾಥ್, ಸಬ್ಕಾ ವಿಕಾಸ್ʼʼ ಘೋಷಣೆ ನಿಲ್ಲಿಸುವ ಸಮಯ ಬಂದಿದೆ ಎಂದು ಪಶ್ಚಿಮ ಬಂಗಾಳದ ವಿಪಕ್ಷ ನಾಯಕ ಮತ್ತು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಹೇಳಿದ್ದಾರೆ.


ಕೋಲ್ಕತ್ತಾದಲ್ಲಿ ನಡೆದ ರಾಜ್ಯ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭೆಯಲ್ಲಿ ಬಹುಮತ ಕಳೆದುಕೊಂಡ ನಂತರ ಪಕ್ಷವು ಮುನ್ನಡೆಯಲು ‘ಜೋ ಹಮಾರೆ ಸಾಥ್, ಹಮ್ ಉಂಕೆ ಸಾಥ್’ (ಯಾರು ನಮ್ಮೊಂದಿಗಿದ್ದಾರೆ, ಅವರೊಂದಿಗೆ ನಾವಿದ್ದೇವೆ) ಎಂಬ ಹೊಸ ಘೋಷಣೆ ನೀಡಬೇಕು ಎಂದು ಕರೆ ನೀಡಿದ್ದಾರೆ.

- Advertisement -


ಸಬ್ಕಾ ಸಾಥ್, ಸಬ್ಕಾ ವಿಕಾಸ್ʼ ಎಂದು ನಮ್ಮ ನಾಯಕರು ಹೇಳುತ್ತಾರೆ. ಆದರೆ ನಾನು ಇನ್ಮುಂದೆ ಇದನ್ನ ಹೇಳಲ್ಲ. ಬದಲಿಗೆ ʻಜೋ ಹಮಾರೆ ಸಾಥ್, ಹಮ್ ಉಂಕೆ ಸಾಥ್ʼ ಎಂದು ಹೇಳುತ್ತೇವೆ. ʻಸಬ್ಕಾ ಸಾಥ್, ಸಬ್ಕಾ ವಿಕಾಸ್ʼ ಮತ್ತು ಅಲ್ಪಸಂಖ್ಯಾತ ಮೋರ್ಚಾ ಅಗತ್ಯವಿಲ್ಲ, ಎಂದು ಸುವೇಂದು ಅಧಿಕಾರಿ ಹೇಳಿದ್ದಾರೆ.



Join Whatsapp