‘ಕ್ರಾಂತಿ’ ಸಿನಿಮಾ ಪ್ರಚಾರದ ವೇಳೆ ನಟ ದರ್ಶನ್ ಮೇಲೆ ಚಪ್ಪಲಿ ಎಸೆದ ಕಿಡಿಗೇಡಿಗಳು

Prasthutha|

ಬೆಂಗಳೂರು: ಶಿಕ್ಷಣದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ವಿವರಿಸುವ ‘ಕ್ರಾಂತಿ’ ಸಿನಿಮಾ ಪ್ರಚಾರದ ವೇಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಘಟನೆ ಬೆಳಕಿಗೆ ಬಂದಿದೆ.

- Advertisement -


ವೇದಿಕೆ ಬರುವುದಕ್ಕೂ ಮುನ್ನ ದರ್ಶನ್ ಅವರು ಪುನೀತ್ ರಾಜ್’ಕುಮಾರ್ ಪುತ್ಥಳಿಗೆ ಹೂ ಮಾಲೆ ಹಾಕಿದ್ದರು. ಆ ಬಳಿಕವೇ ‘ಕ್ರಾಂತಿ’ ಸಿನಿಮಾದ ಎರಡನೇ ಹಾಡನ್ನು ರಿಲೀಸ್ ಮಾಡುವುದಕ್ಕೆ ವೇದಿಕೆ ಮೇಲೆ ಬಂದಿದ್ದರು. ಈ ವೇಳೆ ಯಾರೋ ಕಿಡಿಗೇಡಿ ದರ್ಶನ್ ಮೇಲೆ ಚಪ್ಪಲಿ ಎಸೆದಿದ್ದಾರೆ. ಇದು ವೀಡಿಯೋದಲ್ಲಿ ಸೆರೆಯಾಗಿದೆ.


ಈ ಘಟನೆ ಬಳಿಕ, ನಟ ದರ್ಶನ್ ತನ್ನ ಮೇಲೆ ಚಪ್ಪಲಿ ಬಿದ್ದರೂ, ತಲೆಕೆಡಿಸಿಕೊಳ್ಳಲಿಲ್ಲ. ಪಕ್ಕದಲ್ಲಿದ್ದ ಪೊಲೀಸ್ ಅಧಿಕಾರಿ ವೇದಿಕೆ ಮೇಲೆ ಬಿದ್ದ ಚಪ್ಪಲಿಯನ್ನು ಕೆಳಗೆ ಹಾಕಿದರು. ತಕ್ಷಣವೇ ನಟಿ ರಚಿತಾ ರಾಮ್ ಗೆ ಮಾತು ನಿಲ್ಲಿಸುವಂತೆ ಸೂಚನೆ ನೀಡಿ, ಅಲ್ಲಿಂದ ತೆರಳಿದರು ಎನ್ನಲಾಗಿದೆ.

- Advertisement -


ಕಿಡಿಗೇಡಿಗಳ ಈ ಕೃತ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ನೋಡಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Join Whatsapp