ಜಿಲ್ಲಾ ನ್ಯಾಯಾಲಯದ ಎದುರೇ ಆರೋಪಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

Prasthutha|

ಹಾಪುರ್(ಉತ್ತರ ಪ್ರದೇಶ): ಹರ್ಯಾಣದಿಂದ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆತಂದಿದ್ದ ಆರೋಪಿಯನ್ನು ಅಪರಿಚಿತ ವ್ಯಕ್ತಿಗಳು ಮಂಗಳವಾರ ಹಾಪುರ್ ಜಿಲ್ಲಾ ನ್ಯಾಯಾಲಯದ ಗೇಟ್ ಬಳಿ ಪೊಲೀಸರ ಸಮ್ಮುಖದಲ್ಲೇ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

- Advertisement -

ಪ್ರಕರಣದ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗಲು ಲಖನ್ ಸಿಂಗ್ ಎಂಬಾತನನ್ನು ಹರಿಯಾಣದ ಫರಿದಾಬಾದ್ ನಿಂದ ಪೊಲೀಸ್ ಭದ್ರತೆಯಲ್ಲಿ ಕರೆತರಲಾಗಿತ್ತು. ಜಿಲ್ಲಾ ನ್ಯಾಯಾಲಯಕ್ಕೆ ಕರೆತರುತ್ತಿದ್ದಂತೇ ದ್ವಾರದಲ್ಲಿ ಅಪರಿಚಿತ ವ್ಯಕ್ತಿಗಳು ಲಖನ್ ಮೇಲೆ ಐದು ಸುತ್ತು ಗುಂಡು ಹಾರಿಸಿದ್ದಾರೆ.

https://twitter.com/AsianDigest/status/1559431950523179008?s=20&t=gFPtV5pSL7JkAigoksvCSQ

ಆರೋಪಿಯನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಮೃತಪಟ್ಟಿವುದಾಗಿ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ದೀಪಕ್ ಭೂಕರ್ ಖಚಿತಪಡಿಸಿದ್ದಾರೆ.

- Advertisement -

ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ದಾಳಿಕೋರರನ್ನು ಹುಡುಕಲು ಪೊಲೀಸ್ ಠಾಣೆಯೊಂದಿಗೆ ಎಸ್ ಒಜಿಯ ತಂಡವನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp