ಎಟಿಎಂ ಯಂತ್ರ ಕಿತ್ತು ಕಂಟೇನರ್’ನಲ್ಲಿ ತುಂಬಿಕೊಂಡು ಪರಾರಿಯಾದ ದುಷ್ಕರ್ಮಿಗಳು

Prasthutha|

ಬೆಂಗಳೂರು: ಎಟಿಎಂ ಕೇಂದ್ರಕ್ಕೆ ನುಗ್ಗಿರುವ ದುಷ್ಕರ್ಮಿಗಳು ಎಟಿಎಂ ಯಂತ್ರವನ್ನೇ ಕಿತ್ತುಕೊಂಡು ಕಂಟೇನರ್’ನಲ್ಲಿ ತುಂಬಿಕೊಂಡು ಪರಾರಿಯಾಗಿರುವ ಘಟನೆ ಬೆಳ್ಳಂದೂರಿನ ಹರಳೂರು ರಸ್ತೆಯಲ್ಲಿ ನಡೆದಿದೆ.

- Advertisement -

ಹರಳೂರು ರಸ್ತೆಯ ಬ್ಯಾಂಕ್ ಆಫ್ ಬರೋಡಾದ ಎಟಿಎಂ ಕೇಂದ್ರಕ್ಕೆ ನುಗ್ಗಿರುವ ದುಷ್ಕರ್ಮಿಗಳು ಎಟಿಎಂ ಯಂತ್ರವನ್ನು ಕಿತ್ತು ಕಂಟೇನರ್’ನಲ್ಲಿ ತುಂಬಿಸಿಕೊಂಡು ಕದ್ದೊಯ್ದಿದ್ದಾರೆ.

ಕಳೆದ ಡಿ.10ರ ಮಧ್ಯ ರಾತ್ರಿ 2.30ರ ಸುಮಾರಿಗೆ ಈ ಘಟನೆ ನಡೆದಿದೆ. ಯಂತ್ರ ಕಳವು ನಡೆದಿರುವುದು ಮರುದಿನ ಬೆಳಿಗ್ಗೆ ಕಂಡು ಬಂದಿದ್ದು ಬ್ಯಾಂಕ್’ನ ಅಧಿಕಾರಿಗಳು ಕೇಂದ್ರಕ್ಕೆ ಧಾವಿಸಿ  ಬೆಳ್ಳಂದೂರು ಪೊಲೀಸರಿಗೆ ಮಾಹಿತಿ ನೀಡಿ ದೂರು ದಾಖಲಿಸಿದ್ದಾರೆ.

- Advertisement -

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ಶೋಧಕಾರ್ಯ ನಡೆಸಲಾಗಿದೆ ಎಂದು ಡಿಸಿಪಿ ಗಿರೀಶ್ ತಿಳಿಸಿದ್ದಾರೆ.

ಟ್ರಕ್’ನೊಂದಿಗೆ ಬಂದ ಕತರ್ನಾಕ್ ಕಳ್ಳರು, ಎಟಿಎಂ ಕೇಂದ್ರಕ್ಕೆ ನುಗ್ಗಿ ಅಲ್ಲಿದ್ದ ಸಿಸಿಕ್ಯಾಮರಾಕ್ಕೆ ಸ್ಪ್ರೇ ಮಾಡಿದ್ದಾರೆ. ನಂತರ ಎಟಿಎಂ ಯಂತ್ರವನ್ನು ಕಂಟೇನರ್’ನಲ್ಲಿ ತುಂಬಿಸಿಕೊಂಡು ಪರಾರಿಯಾಗಿರುವುದು ಹತ್ತಿರದ ಸಿಸಿ ಟಿವಿ ಕ್ಯಾಮಾರದಲ್ಲಿ ಸೆರೆಯಾಗಿದ್ದು ಅದನ್ನು ಪರಿಶೀಲನೆ ನಡೆಸಲಾಗಿದೆ ಎಂದು ಹೇಳಿದರು.

Join Whatsapp