ಭಾರತ್ ಜೋಡೊ ನ್ಯಾಯ ಯಾತ್ರೆಯ ಬ್ಯಾನರ್ ಹರಿದ ಕಿಡಿಗೇಡಿಗಳು

Prasthutha|

ಅಸ್ಸಾಂ: ಭಾರತ್ ಜೋಡೊ ನ್ಯಾಯ ಯಾತ್ರೆ ಪ್ರಯುಕ್ತ ಹಾಕಲಾಗಿದ್ದ ಬ್ಯಾನರ್ ಮತ್ತು ಪೋಸ್ಟರ್ ಗಳನ್ನು ಕಿಡಿಗೇಡಿಗಳು ಹಾನಿಗೊಳಿಸಿರುವ ಘಟನೆ ಅಸ್ಸಾಂನ ಉತ್ತರ ಲಖಿಂಪುರದಲ್ಲಿ ನಡೆದಿದೆ.

- Advertisement -


ಉತ್ತರ ಲಖಿಂಪುರ ಪಟ್ಟಣದಲ್ಲಿ ಹಾಕಲಾಗಿದ್ದ ಬ್ಯಾನರ್ ಗಳು, ಪೋಸ್ಟರ್ ಗಳನ್ನು ಹಾನಿಗೊಳಿಸಲಾಗಿದೆ. ಯಾತ್ರೆ ಯಶಸ್ವಿಯಾದ ಬೆನ್ನಲ್ಲೇ ಕಿಡಿಗೇಡಿಗಳು ಈ ಕೆಲಸಕ್ಕೆ ಕೈ ಹಾಕಿದ್ದಾರೆ’ ಎಂದು ಕಾಂಗ್ರೆಸ್ ನಾಯಕ ಭರತ್ ನಾರಾಹ್ ತಿಳಿಸಿದ್ದಾರೆ.


ರಾಜ್ಯದಲ್ಲಿ ಯಾತ್ರೆ ಸುಗಮವಾಗಿ ನಡೆಯದಂತೆ ಹಲವು ಅಡೆತಡೆಗಳನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಸೃಷ್ಟಿಸಿತ್ತು. ಯಾತ್ರೆಗೆ ಜನ ಸೇರದಂತೆ ಮಾಡಲು ಪ್ರಯತ್ನಿಸಿತ್ತು. ಆದರೆ ಯಾತ್ರೆಯ ಯಶಸ್ಸನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದರು.

Join Whatsapp
Exit mobile version