Home ಕರಾವಳಿ SDPI ಬ್ಯಾನರ್ ಹರಿದ ದುಷ್ಕರ್ಮಿಗಳು: ಪೊಲೀಸರಿಗೆ ದೂರು

SDPI ಬ್ಯಾನರ್ ಹರಿದ ದುಷ್ಕರ್ಮಿಗಳು: ಪೊಲೀಸರಿಗೆ ದೂರು

ಮಂಗಳೂರು : SDPI ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸಮಿತಿಗೆ ಆಯ್ಕೆಯಾದ ನೂತನ ನಾಯಕರಿಗೆ ಶುಭಕೋರಿ ಅಭಿನಂದನೆ ಸಲ್ಲಿಸಿ ಹಾಕಲಾಗಿದ್ದ ಬ್ಯಾನರನ್ನು ಕಿಡಿಗೇಡಿಗಳು ಹರಿದು ಹಾಕಿ ಹಾನಿಗೊಳಿಸಿದ ಘಟನೆ ಉಪ್ಪಿನಂಗಡಿಯ ಕಡವಿನ ಬಾಗಿಲು ಬಳಿ ನಡೆದಿದೆ.


ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಇಳಂತಿಲ ಎಸ್ ಡಿಪಿಐ ಸಮಿತಿಯ ಅಧ್ಯಕ್ಷರು ಪೊಲೀಸ್ ಠಾಣೆಗೆ ದೂರು ನೀಡಿ ಆರೋಪಿಗಳ ಪತ್ತೆಗೆ ಆಗ್ರಹಿಸಿದ್ದಾರೆ.ಇತ್ತೀಚೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್ ಡಿಪಿಐ ಸಮಿತಿಗೆ ನೂತನ ಪದಾಧಿಕಾರಿಗಳ ನೇಮಕ ನಡೆದಿತ್ತು. ಆಯ್ಕೆಯಾದ ಪದಾಧಿಕಾರಿಗಳ ಭಾವಚಿತ್ರವನ್ನೊಳಗೊಂಡ ಬ್ಯಾನರ್ ಅನ್ನು ಕಡವಿನಬಾಗಿಲು ಬಳಿ ಹಾಕಲಾಗಿತ್ತು. ಆದರೆ ಇದನ್ನು ಇಂದು ದುಷ್ಕರ್ಮಿಗಳು ಹರಿದುಹಾಕಿದ್ದರು. ಇದನ್ನು ಗಮನಿಸಿದ ಎಸ್ ಡಿಪಿಐ ಕಾರ್ಯಕರ್ತರು ಸ್ಥಳದಲ್ಲಿ ಪ್ರತಿಭಟನೆ ನಡೆಸಿ ತಕ್ಷಣ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದರು.
ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಆರೋಪಿಗಳನ್ನು ಬಂಧಿಸುವುದಾಗಿ ಭರವಸೆ ನೀಡಿದ್ದಾರೆ.

Join Whatsapp
Exit mobile version