ಹಿಂದು ಯುವತಿಯರ ನಾಪತ್ತೆ ಪ್ರಕರಣ; ತನಿಖೆ ಚುರುಕು: ಆರಗ ಜ್ಞಾನೇಂದ್ರ

Prasthutha|

ಬೆಂಗಳೂರು:  ಹಿಂದು ಯುವತಿಯರು ಮತ್ತು ಮಹಿಳೆಯರು ನಾಪತ್ತೆಯಾಗುತ್ತಿರುವ  ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ಚುರುಕುಗೊಳಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.

- Advertisement -

ಹಿಂದುಪರ ಸಂಘಟನೆಗಳ ನಿಯೋಗದ ಮನವಿ ಸ್ವೀಕರಿಸಿ ಮಾತನಾಡಿದ ಅವರು, ಕಾನೂನು ಮತ್ತು ಸುವ್ಯವಸ್ಥೆ ಕಾಯ್ದುಕೊಳ್ಳುವ ಜತೆಗೆ ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಸರ್ಕಾರ ಬದ್ಧತೆಯಿಂದ ಕಾರ್ಯನಿರ್ವವಹಿಸುತ್ತದೆ. ಲವ್ ಜಿಹಾದ್ ತಡೆಗೆ ವಿಶೇಷ ಪೊಲೀಸ್ ದಳ ರಚನೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದರೂ ಲವ್ ಜಿಹಾದ್ ಅವ್ಯಾಹತವಾಗಿ ನಡೆಯುತ್ತಿದ್ದು, ಉತ್ತರಪ್ರದೇಶ ಮಾದರಿಯಲ್ಲಿ ಲವ್ ಜಿಹಾದ್ ವಿರೋಧಿ ವಿಶೇಷ ದಳ ರಚಿಸಲು ಹಿಂದೂ ಜನಜಾಗೃತಿ ಸಮಿತಿ ಹಾಗೂ ಇನ್ನಿತರ ಸಂಘಟನೆಗಳು ಮನವಿ ಮಾಡಿದವು.

- Advertisement -

ರಾಷ್ಟ್ರೀಯ ತನಿಖಾ ದಳದ ವರದಿಯಲ್ಲಿ ಉಲ್ಲೇಖಿಸಿದ ಅಂಶಗಳ ಪ್ರಕಾರ ರಾಜ್ಯದ ಐದು ಜಿಲ್ಲೆಗಳಲ್ಲಿ ಶಾಹೀನ್ ಗ್ಯಾಂಗ್ ಸಕ್ರಿಯವಾಗಿದ್ದು, ಕೆಲವು ಮೌಲ್ವಿಗಳು ಹಾಗೂ ಮದರಸಾಗಳು ಲವ್ ಜಿಹಾದ್​ಗೆ ಸಾಥ್ ನೀಡಿವೆ ಎಂದು ಈ ಮನವಿಯಲ್ಲಿ ತಿಳಿಸಲಾಗಿದೆ.

ನಿಯೋಗದಲ್ಲಿ ಹಿಂದೂ ಜನಜಾಗೃತಿ ಸಮಿತಿ ರಾಜ್ಯ ವಕ್ತಾರ ಮೋಹನ್ ಗೌಡ, ರಣರಾಗಿಣಿ ತಂಡದ ಭವ್ಯಾಗೌಡ, ದುರ್ಗಾಸೇನೆಯ ನಂದಿನಿ ನಾಗರಾಜ್, ಶ್ರೀರಾಮಸೇನೆಯ ಸುಂದರೇಶ್, ಅಮರನಾಥ್ ಇದ್ದರು.

Join Whatsapp
Exit mobile version