Home ಟಾಪ್ ಸುದ್ದಿಗಳು ನಾಪತ್ತೆಯಾಗಿದ್ದ ಮುರುಘಾಶ್ರೀ ಪೋಕ್ಸೋ ಪ್ರಕರಣದ ಸಂತ್ರಸ್ತ ಬಾಲಕಿ ಮೈಸೂರಿನ ಒಡನಾಡಿ ಸಂಸ್ಥೆಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ಮುರುಘಾಶ್ರೀ ಪೋಕ್ಸೋ ಪ್ರಕರಣದ ಸಂತ್ರಸ್ತ ಬಾಲಕಿ ಮೈಸೂರಿನ ಒಡನಾಡಿ ಸಂಸ್ಥೆಯಲ್ಲಿ ಪತ್ತೆ

ಚಿತ್ರದುರ್ಗ: ನಾಪತ್ತೆಯಾಗಿದ್ದ ಚಿತ್ರದುರ್ಗದ ಮುರುಘಾ ಮಠದ ಮಠಾಧೀಶ ಡಾ. ಶಿವಮೂರ್ತಿ ಶರಣರ ಪೋಕ್ಸೋ ಪ್ರಕರಣದ ಸಂತ್ರಸ್ತ ಬಾಲಕಿ ಮೈಸೂರಿನ ಒಡನಾಡಿ ಸಂಸ್ಥೆಯಲ್ಲಿ ಪತ್ತೆಯಾಗಿದ್ದಾಳೆ. ಬಾಲಕಿ ನಾಮಪತ್ತೆಯಾಗಿದ್ದಾಳೆ ಎಂದು ಆಕೆಯ ಚಿಕ್ಕಪ್ಪ ಮೇ 24ರಂದು ಮಹಿಳಾ ಠಾಣೆಗೆ ದೂರು ನೀಡಿದ್ದರು.

ಮುರುಘಾಶ್ರೀ ಬೆಂಬಲಿಗರಿಂದ ಸಂತ್ರಸ್ತೆ ಚಿಕ್ಕಪ್ಪನ ಮೂಲಕ ಬಾಲಕಿಗೆ ಒತ್ತಡ ಹಾಕುತ್ತಿದ್ದರಿಂದ ಆಕೆ ಮನೆಬಿಟ್ಟು ಹೋಗಿದ್ದಾಳೆ ಎಂದು ತಿಳಿದುಬಂದಿದೆ.

ಸಂತ್ರಸ್ತೆ ಬಾಲಕಿ ತಮ್ಮ ಬಳಿ ಬಂದಿದ್ದಾಳೆ ಎಂದು ಒಡನಾಡಿ ಸಂಸ್ಥೆ, ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಗೆ ಮಾಹಿತಿ ನೀಡಿದೆ.

ಮುರುಘಾ ಶರಣರ ವಿರುದ್ಧದ ಪೋಕ್ಸೋ ಪ್ರಕರಣ ಸಂಬಂಧ​​ ಶ್ರೀಗಳ ಬೆಂಬಲಿಗರು ಸಂತ್ರಸ್ತೆ ಚಿಕ್ಕಪ್ಪನ ಮೂಲಕ ಬಾಲಕಿ ಮೇಲೆ ಒತ್ತಡ ಹೇರಲಾರಂಭಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಬಾಲಕಿ ಸಹ ಪೊಲೀಸರು, ಸಿಡಬ್ಲ್ಯುಸಿ ಎದುರು ತನ್ನ ಮೇಲೆ ಬರುತ್ತಿರುವ ಒತ್ತಡಗಳ ಬಗ್ಗೆ ಅಳಲು ತೋಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

Join Whatsapp
Exit mobile version