ಮಡಿಕೇರಿ: ನಾಪತ್ತೆಯಾಗಿದ್ದ ಪೊಲೀಸ್ ಅಧಿಕಾರಿ ಮೃತ ದೇಹ ಪತ್ತೆ

Prasthutha|

ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನಲ್ಲಿ ಕಳೆದ ಎರಡು ವಾರಗಳ ಹಿಂದೆ ನಾಪತ್ತೆಯಾಗಿದ್ದ ಪೊಲೀಸ್ ಎಎಸ್‌ಐಯ ಮೃತದೇಹ ಪತ್ತೆಯಾಗಿದೆ. ಹಾಸನ ಜಿಲ್ಲೆ ಕೊಣನೂರಿನ ಕೆರೆಯಲ್ಲಿ ಕುಶಾಲನಗರದ ಸಂಚಾರಿ ಠಾಣಾ ಎಎಸ್‌ಐ ಸುರೇಶ್‌ನ ಮೃತದೇಹ ಪತ್ತೆಯಾಗಿದೆ. ಕಳೆದ 13 ದಿನಗಳಿಂದ ಎಎಸ್‌ಐ ಸುರೇಶ್ ನಾಪತ್ತೆಯಾಗಿದ್ದರು. ಈ ಸಂಬಂಧ  ಕುಟುಂಬ ಸದಸ್ಯರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement -

ಕುಶಾಲನಗರ ಸಂಚಾರಿ ಪೊಲೀಸ್ ಎಎಸ್‌ಐ ಸುರೇಶ್‌ನ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿರುತ್ತು. ಇದ್ರಿಂದ ಕುಟುಂಭಸ್ಥರಲ್ಲಿ ಆತಂಕ ಸೃಷ್ಟಿಸಿತ್ತು. ಅಷ್ಟೇ ಅಲ್ಲದೇ ಕುಶಾಲನಗರದಲ್ಲಿ ಇರುವ ಪೊಲೀಸ್ ಕ್ವಾಟ್ರಸ್ ಕೂಡ ಬೀಗ ಹಾಕಿ ಸುರೇಶ್ ತೆರಳಿದ್ದರು.

ಈ ನಿಟ್ಟಿನಲ್ಲಿ ಕುಶಾಲನಗರ ಪೊಲೀಸರು ಹಾಗೂ ಸಹೋದ್ಯೋಗಿಗಳು ಸುರೇಶ್ ಅವರ ಫೋನ್‌ನ ಟವರ್ ಲೊಕೇಶನ್ ಅನ್ನು ಪರಿಶೀಲಿಸಿದಾಗ ಕುಶಾಲನಗರ ಸಮೀಪದ ಗುಮ್ಮನಕೊಲ್ಲಿಯಲ್ಲಿ ಎಂಬಲ್ಲಿ ಮೊಬೈಲ್ ಸ್ವಿಚ್ ಆಫ್ ಆಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸುತ್ತಮುತ್ತಲಿನ ಪ್ರದೇಶದಲ್ಲಿ ಸುರೇಶ್ ಅವರಿಗೆ ಹುಡುಕಾಟದಲ್ಲಿ ನಡೆಸಿದ್ದರು.

- Advertisement -

ಸುರೇಶ್ ಅವರು ಕಾಣೆಯಾಗಿರುವ ಬೆನ್ನಲ್ಲೇ ಸುರೇಶ್ ಪತ್ನಿಗೆ ವಿಷಯ ತಿಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರ ಪತ್ನಿ ಶೋಭಾ ಕುಶಾಲನಗರದ ಪೊಲೀಸ್ ಠಾಣೆಗೆ ದೂರು ನೀಡಿ ಹುಡುಕಿಕೊಡುವಂತೆ ಮನವಿ ಮಾಡಿದರು.

ಮೂಲತಃ ಸುರೇಶ್ ಹಾಸನ ಜಿಲ್ಲೆಯ ಕೊಣನೂರಿನವರಾಗಿದ್ದಾರೆ. ಅನೇಕ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅಲ್ಲದೆ ಸಾಕಷ್ಟು ರಜೆ ಹಾಕುತ್ತಿದ್ದರು ಎಂದು ಹೇಳಲಾಗುತ್ತಿದೆ.

Join Whatsapp
Exit mobile version