ರಾಜಕೀಯ ಲಾಭಕ್ಕಾಗಿ ಹಿಂದೂ ಧರ್ಮದ ದುರ್ಬಳಕೆ; ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಸಿ ಎಂ ಬೊಮ್ಮಾಯಿ

Prasthutha|

ಬೆಳಗಾವಿ: ಕಾಂಗ್ರೆಸ್ಸಿಗರು ಹಿಂದೂ ಧರ್ಮವನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

- Advertisement -


ಸುರದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಭಜಿಸುವ ಶಕ್ತಿಗಳ ಜೊತೆ ಕೈ ಜೋಡಿಸುವುದೇ ಕಾಂಗ್ರೆಸ್ ನ ಸಂಸ್ಕೃತಿ. ಅಧಿಕಾರಕ್ಕಾಗಿ ಹಿಂದೂಗಳನ್ನು ದ್ವೇಷಿಸುವುದು, ದೂಷಿಸುವುದು ಕಾಂಗ್ರೆಸ್ ನ ಜಾಯಮಾನ. ಸತೀಶ್ ಜಾರಕಿಹೊಳಿ ದುಡುಕುವವರಲ್ಲ. ಕಾಂಗ್ರೆಸ್ ಸಹವಾಸದಿಂದ ಅಲ್ಲಿನ ಸಂಸ್ಕೃತಿ ಪ್ರಭಾವದಿಂದ ಹೀಗಾಗಿದೆ ಎಂದು ಹೇಳಿದರು.


ಕಾಂಗ್ರೆಸ್ಸಿಗರಿಗೆ ದೇಶದ ಅಭಿಮಾನ ಆಗಲಿ, ಪ್ರೀತಿ ಆಗಲಿ ಎಳ್ಳುಕಾಳಷ್ಟು ಇಲ್ಲ. ಇದಕ್ಕೆ ಹತ್ತು ಹಲವಾರು ಉದಾಹರಣೆ ನೀಡಬಹುದು. ಹೀಗಾಗಿ ರಾಜಕಾರಣಕ್ಕಾಗಿ, ಮತಕ್ಕಾಗಿ ಮಾಡುವ ಕೆಟ್ಟ ರಾಜಕಾರಣ ನಿಲ್ಲಬೇಕು ಎಂದು ಆಗ್ರಹಿಸಿದರು.

Join Whatsapp