MRPL ಉದ್ಯೋಗ ನೇಮಕಾತಿಯಲ್ಲಿ ಸ್ಥಳೀಯರಿಗಾದ ಅನ್ಯಾಯವನ್ನು ಸರಿಪಡಿಸುವಂತೆ ಮಿಥುನ್ ರೈ ಆಗ್ರಹ

Prasthutha|

- Advertisement -

ಮಂಗಳೂರು : ಎಂಆರ್ ಪಿಎಲ್ ನ ಉದ್ಯೋಗ ನೇಮಕಾತಿಯಲ್ಲಿ ಸ್ಥಳೀಯರಿಗೆ ಅನ್ಯಾಯವಾಗಿದೆ. ಕೂಡಲೇ ಈ ನೇಮಕಾತಿಯನ್ನು ತಡೆಹಿಡಿದು ಸ್ಥಳೀಯರಿಗೆ ಅವಕಾಶ ನೀಡಬೇಕೆಂದು ಕಾಂಗ್ರೆಸ್ ನ ಯುವ ಮುಖಂಡ ಮಿಥುನ್ ರೈ ಆಗ್ರಹಿಸಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಮಾತನಾಡಿದ ಅವರು, ಎಂಆರ್ ಪಿಎಲ್ ನಲ್ಲಿ ಸಿ, ಡಿ ದರ್ಜೆಯ ಉದ್ಯೋಗವನ್ನು ಸರೋಜಿನಿ ಮಹಿಷಿ ವರದಿ ಆಧಾರದ ಮೇಲೆ ಸ್ಥಳೀಯರಿಗೆ ಕೂಡಲೇ ಅವಕಾಶ ನೀಡಬೇಕು. ಒಂದು ವೇಳೆ ನೇಮಕಾತಿಯನ್ನು ತಡೆಹಿಡಿಯದಿದ್ದರೆ ಕಾಂಗ್ರೆಸ್ ಬೃಹತ್ ಹೋರಾಟ ಮಾಡಲಿದೆ ಎಂದು ಎಚ್ಚರಿಕೆ ನೀಡಿದರು.

ಈ ಉದ್ಯೋಗ ನೇಮಕಾತಿಗೆ ದಿಲ್ಲಿಯ ಖಾಸಗಿ ಸಂಸ್ಥೆಗೆ ಗುತ್ತಿಗೆ ನೀಡಿತ್ತು. ಕರ್ನಾಟಕ ರಾಜ್ಯ ಸೇರಿದಂತೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಿಂದ ಸಾವಿರಾರು ಮಂದಿ ಅರ್ಜಿ ಹಾಕಿದರೂ ಕೇವಲ ನಾಲ್ಕು ಮಂದಿಗೆ ಮಾತ್ರ ಉದ್ಯೋಗ ಸಿಕ್ಕಿದೆ. ಇನ್ನೂ ಕೇವಲ ವೆರಿಫಿಕೇಶನ್ ಸೇರಿದಂತೆ ಒಂದು ಪ್ರಕ್ರಿಯೆ ಮಾತ್ರ ಉಳಿದಿದ್ದು ಇದನ್ನು ಕೂಡಲೇ ತಡೆ ಹಿಡಿಯಬೇಕು. ಇಲ್ಲದಿದ್ದರೆ ನಾವು ಹೋರಾಟ ಮಾಡಿ ಪ್ರತಿಭಟಿಸಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Join Whatsapp