Home Uncategorized ಚಿರತೆ ದಾಳಿಯಿಂದ ಗಾಯಗೊಂಡ ಪತ್ರಕರ್ತನನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಶಾಸಕ ಬಂಡೆಪ್ಪ ಖಾಶೆಂಪುರ್

ಚಿರತೆ ದಾಳಿಯಿಂದ ಗಾಯಗೊಂಡ ಪತ್ರಕರ್ತನನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್: ಇತ್ತೀಚೆಗೆ ವಿಡಿಯೋ ಚಿತ್ರೀಕರಣದ ವೇಳೆ ಚಿರತೆ ದಾಳಿಯಿಂದ ಗಾಯಗೊಂಡು ಬೀದರ್ ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖಾಸಗಿ ವಾಹಿನಿಯೊಂದರ ಜಿಲ್ಲಾ ವರದಿಗಾರ ಸಂಜುಕುಮಾರ್ ಬುಕ್ಕಾರವರನ್ನು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷ, ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.


ಬ್ರಿಮ್ಸ್ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿದ ಅವರು, ಸಂಜುಕುಮಾರ್ ಅವರು ಚಿಕಿತ್ಸೆ ಪಡೆಯುತ್ತಿದ್ದ ವಾರ್ಡ್ ಗೆ ತೆರಳಿ ಅವರನ್ನು ಮಾತನಾಡಿಸಿ ಘಟನೆಯ ವಿವರ ಪಡೆದರು. ವರದಿಗಾರ ಸಂಜುಕುಮಾರ್ ರವರಿಗೆ ಧೈರ್ಯ ತುಂಬಿದರು. ಉತ್ತಮ ಚಿಕಿತ್ಸೆ ನೀಡುವಂತೆ ಆಸ್ಪತ್ರೆಯ ವೈದ್ಯರಿಗೆ ಸೂಚಿಸಿದರು. ಇದೇ ವೇಳೆ ಆಸ್ಪತ್ರೆಯಲ್ಲಿನ ವ್ಯವಸ್ಥೆಗಳ ಬಗ್ಗೆ ಆಸ್ಪತ್ರೆಯ ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು, ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು. ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕೆಂದು ಸಿಬ್ಬಂದಿಗಳಿಗೆ ಸೂಚಿಸಿದರು.


ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಅಶೋಕಕುಮಾರ್ ಕರಂಜೆ, ರಾಜಶೇಖರ ಜವಳೆ ಸೇರಿದಂತೆ ಮುಖಂಡರು, ಆಸ್ಪತ್ರೆಯ ಸಿಬ್ಬಂದಿಗಳು ಇದ್ದರು.

Join Whatsapp
Exit mobile version