ಸಹೋದರನ ಮಗನನ್ನು ಹುಡುಕಿಕೊಟ್ಟವರಿಗೆ ಬಹುಮಾನ ಘೋಷಿಸಿದ ಶಾಸಕ ಎಂ ಪಿ ರೇಣುಕಾಚಾರ್ಯ

Prasthutha|

ದಾವಣಗೆರೆ: ನನ್ನ ಮಗನನ್ನು, ಹುಡುಕಿಕೊಟ್ಟವರಿಗೆ ಬಹುಮಾನ ನೀಡುತ್ತೇನೆ. ನನ್ನ ಮಗನಿಗಾಗಿ ಎಲ್ಲಾ ತ್ಯಾಗಕ್ಕೂ ಸಿದ್ಧನಾಗಿದ್ದೇನೆ ಎಂದು ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಘೋಷಿಸಿದ್ದಾರೆ.

- Advertisement -

ಈ ಬಗ್ಗೆ ತುರ್ತು ಪತ್ರಿಕಾಗೋಷ್ಠಿ ಕರೆದು ಮಾತನಾಡಿದ ಅವರು, ನನ್ನ ಸಹೋದರನ ಮಗನನ್ನು ಅಪಹರಣ ಮಾಡಲಾಗಿದೆ. ಅಪಹರಣಾಕಾರರ ಬೇಡಿಕೆ ಏನಿದ್ದರೂ ನಾನು ಬಗೆಹರಿಸುತ್ತೇನೆ. ಪೊಲೀಸ್ ದೂರು ಕೂಡ ಕೊಡುವುದಿಲ್ಲ ಎಂದು ಕಣ್ಣೀರು ಹಾಕಿದರು.

ನನ್ನ ಸಹೋದರನ ಮಗನಿಗೆ ಆತ್ಮಹತ್ಯೆ ಮಾಡಿಕೊಳ್ಳುವ ಧೈರ್ಯ ಇಲ್ಲ. ಈ ಘಟನೆಯನ್ನು ಗೃಹ ಸಚಿವರು ಹಾಗೂ ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಎಲ್ಲರ ಆಶೀರ್ವಾದದಿಂದ ನಮ್ಮ ಮಗ ಸುರಕ್ಷಿತವಾಗಿ ಮರಳಿ ಬರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

Join Whatsapp