ಒಕ್ಕಲಿಗ ಸಮುದಾಯಕ್ಕೆ 6 ಕೋಟಿ ಮೌಲ್ಯದ ಜಮೀನು ಬರೆದು ಕೊಟ್ಟ ಶಾಸಕ ಶರತ್ ಬಚ್ಚೇಗೌಡ

Prasthutha|

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ‌ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಒಕ್ಕಲಿಗ ಸಮುದಾಯಕ್ಕೆ 6 ಕೋಟಿ ಮೌಲ್ಯದ ಜಮೀನು ಬರೆದು ಕೊಟ್ಟಿದ್ದಾರೆ.

- Advertisement -

ಹೊಸಕೋಟೆಯಲ್ಲಿ ನಿರ್ಣಾಯಕವಾಗಿರುವ ಅತಿ‌ ಹೆಚ್ಚು ಮತಗಳನ್ನು ಹೊಂದಿರುವ ಒಕ್ಕಲಿಗ ಸಮುದಾಯದ ಮತ ಸೆಳೆಯಲು ಯೋಜನೆ ಹಾಕಿರುವ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು 6 ಕೋಟಿ ಮೌಲ್ಯದ ಜಮೀನು ಗಿಫ್ಟ್​ ಮಾಡಿದ್ದಾರೆ. ಹೊಸಕೋಟೆ ತಾಲೂಕು ಒಕ್ಕಲಿಗರ ಸಂಘಕ್ಕೆ ಅರಳೆಮಾಕನಹಳ್ಳಿ ಬಳಿ 3 ಎಕರೆ 10 ಗುಂಟೆ ಜಮೀನು ದಾನ ಮಾಡಿದ್ದಾರೆ.

ಒಕ್ಕಲಿಗ ಸಮುದಾಯವು ಕ್ಷೇತ್ರದಲ್ಲಿ 45 ಸಾವಿರ ಮತಗಳನ್ನ ಹೊಂದಿದ್ದು, ಹೀಗಾಗಿ ಮತಗಳನ್ನ ಗಟ್ಟಿ ಮಾಡಿಕೊಳ್ಳಲು ಜಮೀನು ಗಿಫ್ಟ್​ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

- Advertisement -

ಕಳೆದ ಕೆಂಪೇಗೌಡ ಜಯಂತಿಯಲ್ಲಿ ಜಮೀನು ಕೊಡಿಸುವುದಾಗಿ ಭರವಸೆ ನೀಡಿದ್ದ ಶರತ್, ಇದೀಗ ಹೇಳಿದ್ದ ಮಾತಿನಂತೆ ಚುನಾವಣೆ ಸಂದರ್ಭದಲ್ಲಿ ಜಮೀನು ಗಿಫ್ಟ್​ ಮಾಡಿದ್ದಾರೆ.

ತಾನು ನೀಡಿದ ಜಮೀನಿನಲ್ಲಿ ಶಾಲಾ ಕಾಲೇಜು ಕಟ್ಟಿ ಎಲ್ಲಾ ಸಮುದಾಯದ ಬಡವರಿಗೆ ಅನುಕೂಲ ಮಾಡಿಕೊಡುವುದಾಗಿ ಶಾಸಕರು ಹೇಳಿದ್ದಾರೆ.

Join Whatsapp