Home ಟಾಪ್ ಸುದ್ದಿಗಳು ಶಾಸಕ ತನ್ವೀರ್ ಸೇಠ್ ಗೆ ಕೊಲೆ ಬೆದರಿಕೆ: ದೂರು ದಾಖಲು

ಶಾಸಕ ತನ್ವೀರ್ ಸೇಠ್ ಗೆ ಕೊಲೆ ಬೆದರಿಕೆ: ದೂರು ದಾಖಲು

ಮೈಸೂರು: ಬಜರಂಗದಳ ಮುಖಂಡ ರಘು ಸಕಲೇಶಪುರ ಎಂಬಾತ ಶಾಸಕ ತನ್ವೀರ್ ಸೇಠ್ ಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ ಮತ್ತು ಮಂಡಿ ಪೊಲೀಸ್ ಠಾಣೆ ಹಾಗೂ ಮೈಸೂರು ನಗರ ಪೊಲೀಸ್ ಆಯುಕ್ತ ಬಿ. ರಮೇಶ್ ಅವರಿಗೆ ಕಾಂಗ್ರೆಸ್ ಬ್ಲಾಕ್ ಸಮಿತಿಯಿಂದ ದೂರು ನೀಡಲಾಗಿದೆ.


ಬಜರಂಗದಳ ಕಾರ್ಯಕ್ರಮದಲ್ಲಿ ರಘು ಸಕಲೇಶಪುರ ಎಂಬಾತ ಶಾಸಕರನ್ನು ಏಕವಚನದಲ್ಲಿ ನಿಂದಿಸಿದ್ದಾನೆ. ಟಿಪ್ಪು ಪ್ರತಿಮೆ ಸ್ಥಾಪಿಸುವ ಕನಸು ಬಿಡದಿದ್ದರೆ ಕೊಲೆ ಮಾಡುವುದಾಗಿ ಬಹಿರಂಗ ಹೇಳಿಕೆ ನೀಡಿದ್ದಾನೆ ಎಂದು ಕಾಂಗ್ರೆಸ್ ಬ್ಲಾಕ್ ಸಮಿತಿ ಆರೋಪಿಸಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.

Join Whatsapp
Exit mobile version