ಮಂಗಳೂರಿನಲ್ಲಿ NIA ಘಟಕ ಸ್ಥಾಪಿಸಲು ಶಾಸಕ ವೇದವ್ಯಾಸ ಕಾಮತ್‌ ಒತ್ತಾಯ

Prasthutha|

ಮಂಗಳೂರು: ಇಲ್ಲಿನ ಗರೋಡಿ ಎಂಬಲ್ಲಿ ಆಟೋ ರಿಕ್ಷಾ ಸ್ಫೋಟ ಕುರಿತು ಪ್ರತಿಕ್ರಿಯಿಸಿದ ಸ್ಥಳೀಯ ಶಾಸಕ ವೇದವ್ಯಾಸ ಕಾಮತ್‌, ಮಂಗಳೂರಿನಲ್ಲಿ NIA ಘಟಕ ಸ್ಥಾಪಿಸಬೇಕೆಂದು ಒತ್ತಾಯಿಸಿದ್ದಾರೆ.

- Advertisement -

ಸ್ಫೋಟ ನಡೆದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಅವರು, ‘ಈ ಕೃತ್ಯದ ಬಗ್ಗೆಸಮಗ್ರ ತನಿಖೆ ಆಗಬೇಕು. ರಿಕ್ಷಾದಲ್ಲಿ ಪ್ರಯಾಣಿಸಿದ ವ್ತಕ್ತಿ ಏಕೆ ಕುಕ್ಕರ್‌ ತಂದಿದ್ದ. ಎಲ್ಲಿ ಏನು ಮಾಡಬೇಕೆಂಬ ಉದ್ದೇಶ ಇತ್ತು ಎಂಬ ಬಗ್ಗೆಯೂ ಕೂಲಂಕುಷವಾಗಿ ತನಿಖೆ ನಡೆಸಬೇಕು. ನಗರದಲ್ಲಿ ಯಾವತ್ತೂ ಬಾಂಬ್‌ ಸ್ಫೋಟ ನಡೆದಿರಲಿಲ್ಲ. ಕರ್ನಾಟಕ ಕೇರಳದ ಗಡಿ ಪ್ರದೇಶವಿದು. ಇಲ್ಲಿ ಘಟನೆ ಆದಾಗ ಕೇರಳಕ್ಕೆ ಪರಾರಿಯಾಗುತ್ತಾರೆ. ಇದನ್ನು ತಪ್ಪಿಸಲು NIA ಘಟಕವನ್ನು ಮಂಗಳೂರಿನಲ್ಲಿ ಸ್ಥಾಪಿಸಬೇಕು’ ಎಂದು ಆಗ್ರಹಿಸಿದ್ದಾರೆ.

Join Whatsapp