ಶಾಸಕರಾದ ಗೂಳಿಹಟ್ಟಿ ಶೇಖರ್, ಎಂ.ಪಿ.ಕುಮಾರಸ್ವಾಮಿ ನೀಡಿದ್ದ ರಾಜೀನಾಮೆ ಅಂಗೀಕಾರ

Prasthutha|

ಬೆಂಗಳೂರು: ಹದಿನೈದನೇ ವಿಧಾನಸಭೆಯ ಸದಸ್ಯರಾದ ಗೂಳಿಹಟ್ಟಿ ಡಿ.ಶೇಖರ್ ಹಾಗೂ ಎಂ.ಪಿ.ಕುಮಾರಸ್ವಾಮಿ ಅವರು ತಮ್ಮ ಸ್ಥಾನಗಳಿಗೆ ನೀಡಿದ ರಾಜೀನಾಮೆಗಳನ್ನು ಅಂಗೀಕರಿಸಲಾಗಿದೆ.

- Advertisement -


ಗೂಳಿಹಟ್ಟಿ ಡಿ.ಶೇಖರ್ ಅವರು ಹೊಸದುರ್ಗ ಕ್ಷೇತ್ರದಿಂದ ಬಿಜೆಪಿಯಿಂದ ಆಯ್ಕೆಯಾಗಿದ್ದರು. ಅವರು ಏಪ್ರಿಲ್ 13ರಂದು ಹಾಗೂ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಏಪ್ರಿಲ್ 14ರಂದು ರಾಜೀನಾಮೆ ನೀಡಿದ್ದರು. ಅದೇ ದಿನ ಅವರ ರಾಜೀನಾಮೆಗಳನ್ನು ಅಂಗೀಕರಿಸಲಾಗಿದೆ ಎಂದು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ.

Join Whatsapp