ನಿರುದ್ಯೋಗ, ಬಡತನ, ಭ್ರಷ್ಟಾಚಾರ, ಭಯೋತ್ಪಾದನೆ ಮುಕ್ತ ಮಾಡಿದ ಮೋದಿ:ನಳಿನ್ ಕುಮಾರ್ ಕಟೀಲ್

Prasthutha|

ಬಾಗಲಕೋಟೆ : 60 ವರ್ಷದ ಇತಿಹಾಸದಲ್ಲಿ ದೇಶಕ್ಕೆ ಕಾಂಗ್ರೆಸ್ ನಿರುದ್ಯೋಗ, ಬಡತನ, ಭ್ರಷ್ಟಾಚಾರ, ಭಯೋತ್ಪಾದನೆ ಈ ನಾಲ್ಕನ್ನು ಕಾಂಗ್ರೆಸ್ ಕೊಡುಗೆ ನೀಡಿದೆ ಆದರೆ ಪ್ರಧಾನಿ ಮೋದಿ ಈ ನಾಲ್ಕನ್ನೂ ಮುಕ್ತ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

- Advertisement -


ಬಾಗಲಕೋಟೆಯಲ್ಲಿ ನಡೆದ ಬಿಜೆಪಿ ರಾಜ್ಯ ಮಟ್ಟದ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, 60 ವರ್ಷದ ಇತಿಹಾಸದಲ್ಲಿ ಕಾಂಗ್ರೆಸ್ ಪಕ್ಷವು ಈ ದೇಶಕ್ಕೆ ನಾಲ್ಕು ಕೊಡುಗೆ ಕೊಟ್ಟಿದೆ. ಮೊದಲನೆಯದು ಭ್ರಷ್ಟಾಚಾರ, ಎರಡನೇಯದು ಭಯೋತ್ಪಾದನೆ, ಮೂರನೇಯದು ನಿರುದ್ಯೋಗ ಹಾಗೂ ನಾಲ್ಕನೆಯದು ಬಡತನ. ಆದರೆ ಈ ನಾಲ್ಕನ್ನೂ ಮುಕ್ತ ಮಾಡಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ ಎಂದು ಕಟೀಲ್ ಹೇಳಿದರು.

Join Whatsapp