ಕಲ್ಲಿದ್ದಲು ಕೊರತೆ | ವಿದ್ಯುತ್ ಕಡಿತದ ಬಗ್ಗೆ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಚಿದಂಬರಂ

Prasthutha|

ನವದೆಹಲಿ: ಕಲ್ಲಿದ್ದಲು ಕೊರತೆಯಿಂದಾಗಿ ವ್ಯಾಪಕ ವಿದ್ಯುತ್ ಕಡಿತ ಸಮಸ್ಯೆಯ ಕುರಿತು ಕೇಂದ್ರ ಸರ್ಕಾರವನ್ನು ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ತರಾಟೆಗೆ ತೆಗೆದುಕೊಂಡಿದ್ದಾರೆ.

- Advertisement -

ಈ ಕುರಿತು ಪ್ರತಿಕ್ರಿಯಿಸಿದ ಅವರು, ಪ್ಯಾಸೆಂಜರ್ ರೈಲುಗಳನ್ನು ರದ್ದುಗೊಳಿಸುವುದು ಮತ್ತು ವಿದ್ಯುತ್ ಕಡಿತಗೊಳಿಸುವುದು ಸರ್ಕಾರ ಪರಿಪೂರ್ಣ ಪರಿಹಾರವೆಂದು ಭಾವಿಸಿದಂತಿದೆ ಎಂದು ಕಿಡಿಕಾರಿದ್ದಾರೆ.

ದೇಶದ ಹಲವು ರಾಜ್ಯಗಳು ವಿದ್ಯುತ್ ಕೊರತೆಯಿಂದ ಬಳಲುತ್ತಿರುವ ಮಧ್ಯೆ ಥರ್ಮಲ್ ಸ್ಥಾವರಗಳಲ್ಲಿನ ಕಲ್ಲಿದ್ದಲು ಕೊರತೆಗೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ವಿಪಕ್ಷಗಳು ಆರೋಪಿಸಿವೆ.

- Advertisement -

ಸದ್ಯ ದೇಶದಲ್ಲಿ ನಡೆಯುತ್ತಿರುವ ವಿದ್ಯುತ್ ಬಿಕ್ಕಟ್ಟಿಗೆ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ನಾಯಕರು ಕೇಂದ್ರವನ್ನು ಹೊಣೆಗಾರರನ್ನಾಗಿ ಮಾಡಿದ್ದಾರೆ ಮತ್ತು ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ವಿತರಣೆಗೆ ಕೇಂದ್ರ ಸರ್ಕಾರ ಬೆಂಬಲವನ್ನು ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.



Join Whatsapp