ಮೋದಿ ತಂತ್ರಗಾರಿಕೆ ಕರ್ನಾಟಕದಲ್ಲಿ ನಡೆಯದು: ಸಚಿವ ಎನ್ ಎಸ್ ಭೋಸರಾಜು

Prasthutha|

ಕೊಡಗು: ಮೋದಿಯವರ ತಂತ್ರಗಾರಿಕೆ ಕರ್ನಾಟಕದಲ್ಲಿ ನಡೆಯದು ಎಂದು ಸಚಿವ ಬೋಸರಾಜು ಹೇಳಿದ್ದಾರೆ.

- Advertisement -

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ತಯಾರಿ ನಡೆಸಲಾಗುತ್ತಿದೆ. ರಾಷ್ಟ್ರೀಯ ನಾಯಕರು ಈಗಾಗಲೇ ಕರೆದು ಸಭೆ ಮಾಡಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ನೀಡಲಾಗಿದೆ. ಸಿದ್ದರಾಮಯ್ಯ, ಡಿಕೆಶಿ ಕೊಟ್ಟ ಮಾತನ್ನು ನಡೆಸಿದ್ದಾರೆ ಎಂದು ಹೇಳಿದರು.

ಆಪರೇಷನ್ ಹಸ್ತ ಪದ ಬಳಕೆ ನಾವು ಮಾಡಲ್ಲ, ಆಪರೇಷನ್ ಎಂಬ ಕೆಟ್ಟ ಶಬ್ದ ತಂದಿದ್ದು ಬಿಜೆಪಿ. ಹಲವು ರಾಜ್ಯಗಳಲ್ಲಿ ಬಿಜೆಪಿ ಆಪರೇಷನ್ ಕಮಲ ಮಾಡಿದೆ. ಪಕ್ಷ ಸೇರ್ಪಡೆಗೆ ಹಲವು ಹೊಸ ಹೊಸ ಮುಖಗಳ ಹೆಸರುಗಳು ಬರುತ್ತಿದೆ. ಕಲ್ಯಾಣ ಕರ್ನಾಟಕದಲ್ಲೂ ಹಲವರು ನನ್ನ ಸಂಪರ್ಕದಲ್ಲಿದ್ದಾರೆ. ಇಂತಿಷ್ಟೇ ಜನ ಬರುತ್ತಾರೆಂದು ಹೇಳಲಾಗದು ಎಂದ ಅವರು, ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನಿಲ್ಲದೆ ಅಧಿವೇಶನ ನಡೆದಿದೆ. ಇಂದಿಗೂ ಬಿಜೆಪಿ ಪರಿಸ್ಥಿತಿ ಬದಲಾಗಿಲ್ಲ ಎಂದು ವ್ಯಂಗ್ಯವಾಡಿದರು.

- Advertisement -

ಅನೇಕ ಜಿಲ್ಲೆಗಳಿಂದ ಶಾಸಕರು, ಮಾಜಿ ಶಾಸಕರು, ಪಕ್ಷದ ಪ್ರಮುಖರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಅನೇಕ ನಾಯಕರು ಈಗಾಗಲೇ ಕಾಂಗ್ರೆಸ್ ಪಕ್ಷದ ಸಂಪರ್ಕದಲ್ಲಿದ್ದಾರೆ. ನಮ್ಮಲ್ಲಿ ಯಾವುದೇ ಆಪರೇಷನ್ ಹಸ್ತ ಎಂಬುದು ಇಲ್ಲ. ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಅವರಾಗಿಯೇ ಬರುತ್ತಾರೆ. ಅಂತವರನ್ನು ಪಕ್ಷ ಬರಮಾಡಿಕೊಳ್ಳಲಿದೆ ಎಂದು ಹೇಳಿದರು.

ಮಡಿಕೇರಿ ಶಾಸಕ ಡಾ. ಮಂತರ್ ಗೌಡ , ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಹಾಜರಿದ್ದರು.

Join Whatsapp