ಮೋದಿ ಗೆಲ್ತಿರೋದು ಇವಿಎಂ ಯಂತ್ರದಿಂದ: ಸಿಎಂ ಇಬ್ರಾಹಿಂ

Prasthutha|

ಬೆಂಗಳೂರು: ಇಡಿ, ಐಟಿ, ಸಿಬಿಐ, ವೋಟಿಂಗ್ ಮಿಷನ್ ಈ 4 ಅಂಶ ಬಿಜೆಪಿಯವರಿಗೆ ದೊಡ್ಡ ಅಸ್ತ್ರವಾಗಿದೆ. ಮೋದಿ ಗೆಲ್ತಿರೋದು ಇವಿಎಂ ಯಂತ್ರದಿಂದಾಗಿ. ಮೊದಲು ಇವಿಎಂ ಮಿಷನ್ ವಿರುದ್ಧ ವಿರೋಧ ಪಕ್ಷಗಳು ಹೋರಾಟ ಮಾಡಬೇಕು ಎಂದು ಮಾಜಿ ಸಚಿವ ಸಿ.ಎಂ ಇಬ್ರಾಹಿಂ ಇಂಡಿಯಾ ಕೂಟಕ್ಕೆ ಸಲಹೆ ನೀಡಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಪಂಚದ ಯಾವುದೇ ದೇಶದಲ್ಲಿ ಇವಿಎಂ ಮಿಷನ್ ಇಲ್ಲ. ಎಲ್ಲಾ ಕಡೆ ಬ್ಯಾಲೆಟ್ ಪೇಪರ್ ಇದೆ. ವಿಪಕ್ಷಗಳು ಸೀಟು ಕಿತ್ತಾಟ ಬಿಟ್ಟು ಇವಿಎಂ ಮಿಷನ್ ಬೇಡ ಎಂದು ಬೀದಿಗಿಳಿದು ಹೋರಾಟ ಮಾಡಬೇಕು ಎಂದರು.

ಇವಿಎಂ ಮಿಷನ್ ಇದ್ದರೆ ಚುನಾವಣೆ ಎದುರಿಸದೇ ಬಾಯ್ಕಾಟ್ ಮಾಡಬೇಕು. ಆಗ ದೇಶದಾದ್ಯಂತ ಸುದ್ದಿ ಆಗುತ್ತದೆ ಎಂದರು.

- Advertisement -

ಚುನಾವಣಾ ಆಯೋಗಕ್ಕೆ ಏಕೆ ಇವಿಎಂ ಮೇಲೆ ಅಷ್ಟು ಪ್ರೀತಿ? ಚುನಾವಣಾ ಆಯುಕ್ತರು ಯಾಕೆ ರಾಜೀನಾಮೆ ಕೊಟ್ಟರು ಎಂದು ಅವರು ಪ್ರಶ್ನಿಸಿದ್ದಾರೆ.ಮೋದಿ ಅಹಂ ಬ್ರಹ್ಮಾಸ್ಮಿ ಆಗಿದ್ದಾರೆ. ಆರ್‍ಎಸ್‍ಎಸ್‍ನ್ನು ಮೀರಿ ಅವರು ಹೋಗ್ತಿದ್ದಾರೆ. ಹೀಗಾಗಿಯೇ ಆರ್‍ಎಸ್‍ಎಸ್‍ನವರು ಚುನಾವಣಾ ಬಾಂಡ್ ವಿರುದ್ಧವಾಗಿ ಮಾತಾಡ್ತಿದ್ದಾರೆ. ಆರ್‍ಎಸ್‍ಎಸ್‍ನಲ್ಲೂ ಒಳ್ಳೆಯವರಿದ್ದಾರೆ. ಮೋದಿ ಇಂದು ಆರ್‍ಎಸ್‍ಎಸ್ ಮೀರಿ ಬೆಳೆದಿದ್ದೇನೆ ಎನ್ನುತ್ತಿದ್ದಾರೆ ಎಂದು ಪ್ರಧಾನಿ ವಿರುದ್ಧ ಕಿಡಿಗಾರಿದರು.

Join Whatsapp