ಟಿ20 ವಿಶ್ವಕಪ್: ತವರಿಗೆ ಆಗಮಿಸಿದ ಮೊಹಮ್ಮದ್ ಸಿರಾಜ್’ಗೆ ಅದ್ಧೂರಿ ಸ್ವಾಗತ

Prasthutha|

ಹೈದರಾಬಾದ್: ಟಿ20 ವಿಶ್ವಕಪ್ ಗೆದ್ದು ತವರಿಗೆ ಆಗಮಿಸಿರುವ ಮೊಹಮ್ಮದ್ ಸಿರಾಜ್ ಗೆ ಅದ್ಧೂರಿ ಸ್ವಾಗತ ನೀಡಲಾಗಿದೆ. ಮುಂಬೈನಲ್ಲಿ ವಿಜಯೋತ್ಸವ ಆಚರಿಸಿ ಹೈದರಾಬಾದ್ ಗೆ ಬಂದಿಳಿದ ಸಿರಾಜ್ ಅವರನ್ನು ಕಾರಿನಲ್ಲಿ ನಿಲ್ಲಿಸಿ ಮೆರವಣಿಗೆ ನಡೆಸಲಾಯಿತು. ಈ ವೇಳೆ ಅಭಿಮಾನಿಗಳು ಟೀಮ್ ಇಂಡಿಯಾ ಪರ ಹಾಗೂ ಸಿರಾಜ್ ಗೆ ಜೈಕಾರ ಹಾಕಿದರು.

- Advertisement -


ಇದೀಗ ಮೊಹಮ್ಮದ್ ಸಿರಾಜ್ ಗೆ ನೀಡಲಾದ ಅದ್ಧೂರಿ ಸ್ವಾಗತದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.


ಈ ಬಾರಿಯ ಟಿ20 ವಿಶ್ವಕಪ್ ನಲ್ಲಿ ಮೊಹಮ್ಮದ್ ಸಿರಾಜ್ ಮೂರು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ನ್ಯೂಯಾರ್ಕ್ ಪಿಚ್ ನಲ್ಲಿ ಆಡಲಾದ ಮೂರು ಪಂದ್ಯಗಳಲ್ಲೂ ಸಿರಾಜ್ ಅವಕಾಶ ಪಡೆದಿದ್ದರು. ಈ ವೇಳೆ ಒಂದು ವಿಕೆಟ್ ಪಡೆಯಲಷ್ಟೇ ಶಕ್ತರಾಗಿದ್ದರು. ಹಾಗೆಯೇ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಸಿರಾಜ್ 7 ರನ್ ಬಾರಿಸುವ ಮೂಲಕ ಉಪಯುಕ್ತ ಕಾಣಿಕೆ ನೀಡಿದ್ದರು. ಅಂತಿಮವಾಗಿ ಈ ಪಂದ್ಯದಲ್ಲಿ ಭಾರತ ತಂಡ 6 ರನ್ ಗಳಿಂದ ರೋಚಕ ಜಯ ಸಾಧಿಸಿತ್ತು.



Join Whatsapp