ಮೊಯಿದೀನ್ ಬಾವಾ ಕೊಟ್ಟ ಉಚಿತ ಪೆಟ್ರೋಲ್’ನಿಂದ ಬೈಕ್’ನಲ್ಲಿ ಸುತ್ತಾಡಿ ಹಿಂದೂ ಹೆಣ್ಣು ಮಕ್ಕಳ ಹಿಂದೆ ಬಿದ್ರೆ ಕೈಕಟ್ಟಿ ಕೂರಲ್ಲ: ಭರತ್ ಶೆಟ್ಟಿ

Prasthutha|


ಸುರತ್ಕಲ್: ನಮ್ಮ ಹಿಂದೂ ಹೆಣ್ಮಕ್ಕಳ ಹಿಂದೆ ಬಿದ್ದು ಲವ್ ಜಿಹಾದ್ ಮಾಡಿದರೆ ಕೈಕಟ್ಟಿ ಕೂರಲ್ಲ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಹೇಳಿದ್ದಾರೆ.

- Advertisement -


ಕಾವೂರಿನಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಮಾಜಿ ಶಾಸಕ ಮೊಯಿದೀನ್ ಬಾವಾ ಅವರು ಸುರತ್ಕಲ್ ನಲ್ಲಿ ನಡೆದ ಬೈಕ್ Rallyಗೆ ಬರಲು ಉಚಿತ ಪೆಟ್ರೋಲ್ ಹಾಕಲು ಚೀಟಿಯೊಂದನ್ನು ಜೋಕಟ್ಟೆಯ ಹುಡುಗರಿಗೆ ನೀಡಿದ್ದರು. ಅವರ ಭವಿಷ್ಯದಲ್ಲೇ ಬೌನ್ಸ್ ಆಗದೇ ಇರುವುದು ಈ ಚೀಟಿ ಮಾತ್ರ. ಉಚಿತ ಪೆಟ್ರೋಲ್’ನಿಂದ ನೂರಿನ್ನೂರು ಬೈಕ್ ಗಳು ಬಂದಿತ್ತು. ನೀವು ಪೆಟ್ರೋಲ್ ಹಾಕಿಸ್ಕೊಳ್ಳಿ, Rally ಮಾಡಿ ಏನ್ ಬೇಕಾದರೂ ಮಾಡಿ ಆದರೆ ಅದೇ ಉಚಿತ ಪೆಟ್ರೋಲ್ ಇದೆ ಎಂದು ಬೇಕಾಬಿಟ್ಟಿ ತಿರುಗಾಡಿ ನಮ್ಮ ಹಿಂದೂ ಹೆಣ್ಮಕ್ಕಳನ್ನು ಲವ್ ಜಿಹಾದ್ ಮಾಡುತ್ತೇವೆ ಎಂದು ಅಂದು ಕೊಂಡರೆ ನಿಮ್ಮನ್ನು ಎಲ್ಲಿಗೆ ಕಳುಹಿಸಬೇಕೋ ಅಲ್ಲೇ ಕಳಿಸ್ತೇನೆ ಎಂದು ಹೇಳಿದ್ದಾರೆ.


ನನ್ನ ಸಮಾಜಕ್ಕೆ ಅನ್ಯಾಯವಾದರೆ ಕೈಕಟ್ಟಿ ಕೂರುವುದಿಲ್ಲ. ನನಗೆ ರಾಷ್ಟ್ರಭಕ್ತರ ವೋಟ್ ಸಾಕು, ದೇಶದ್ರೋಹಿಗಳ ವೋಟ್ ಬೇಡ, ದೇಶದ ಬಗ್ಗೆ ಪ್ರೀತಿ, ಕಾಳಜಿ ಇರುವವರು ನನಗೆ ವೋಟ್ ಮಾಡಿದರೆ ಸಾಕು ಎಂದರು.

Join Whatsapp