ರುಚಿಯಾದ ಅಡುಗೆ ಮಾಡಿಲ್ಲವೆಂದು ತಾಯಿಯನ್ನೇ ಕೊಂದ ಮಗ

Prasthutha|


ಠಾಣೆ: ಅಡುಗೆ ಮಾಡಿಲ್ಲವೆಂದು ಪಾಪಿ ಮಗ ತನ್ನ ತಾಯಿಯನ್ನೇ ಕುಡಗೋಲಿನಿಂದ ಹಲ್ಲೆ ಮಾಡಿ ಕೊಲೆಗೈದ ಘಟನೆ ಮಹಾರಾಷ್ಟ್ರದ ಠಾಣೆಯಲ್ಲಿ ನಡೆದಿದೆ.
ಮುರ್ಬಾದ್ ತಾಲೂಕಿನ ವೇಲು ಗ್ರಾಮದಲ್ಲಿ ಭಾನುವಾರ ಸಂಜೆ ಈ ಘಟನೆ ನಡೆದಿದೆ. ಮನೆಯ ವಿಚಾರವಾಗಿ ತಾಯಿ ಮತ್ತು ಮಗನ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಭಾನುವಾರ ಕೂಡ ಜಗಳ ನಡೆದಿದೆ.
‘ರುಚಿಯಾದ ಅಡುಗೆ ಮಾಡಿ ಬಡಿಸಿಲ್ಲವೆಂದು ಆರೋಪಿ ಕೋಪದ ಭರದಲ್ಲಿ ತಾಯಿಯ ಕುತ್ತಿಗೆಯ ಮೇಲೆ ಕುಡಗೋಲಿನಿಂದ ಹಲ್ಲೆ ಮಾಡಿದ್ದಾನೆ. ಇದರಿಂದ ತೀವ್ರ ಗಾಯಗೊಂಡ ಆಕೆ ಕುಸಿದು ಸಾವನ್ನಪ್ಪಿದ್ದಾಳೆ’ ಎಂದು ಠಾಣೆ ಗ್ರಾಮಾಂತರ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.



Join Whatsapp
Exit mobile version