ಅಕ್ರಮ ಹಣ ವರ್ಗಾವಣೆ ಪ್ರಕರಣ: ಸತ್ಯೇಂದರ್ ಜೈನ್ ಗೆ ಜಾಮೀನು ನಿರಾಕರಣೆ

Prasthutha|

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಚಿವ ಸತ್ಯೇಂದರ್ ಜೈನ್ ಮತ್ತು ಇತರ ಇಬ್ಬರ ಜಾಮೀನು ಅರ್ಜಿಗಳನ್ನು ರೂಸ್ ಅವೆನ್ಯೂದಲ್ಲಿರುವ ಸಿಬಿಐ ನ್ಯಾಯಾಲಯ ಗುರುವಾರ ವಜಾಗೊಳಿಸಿದೆ.

- Advertisement -

ಸಿಬಿಐ ವಿಶೇಷ ನ್ಯಾಯಾಧೀಶ ವಿಕಾಸ್ ಧುಲ್ ಅವರು ಇಂದು ಎಲ್ಲಾ ಮೂರು ಜಾಮೀನು ಅರ್ಜಿಗಳನ್ನು ವಜಾಗೊಳಿಸಲಾಗಿದೆ. ಹಾಗೂ ಪ್ರಕರಣವನ್ನು ನವೆಂಬರ್ 29, 2022 ಕ್ಕೆ ನಿಗದಿಪಡಿಸಲಾಗಿದೆ ಎಂದು ಹೇಳಿದರು.

ಮೇ 30, 2022 ರಂದು ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್’ಎ) ಸೆಕ್ಷನ್’ಗಳ ಅಡಿಯಲ್ಲಿ ಜೈನ್ ಅವರನ್ನು ಬಂಧಿಸಿತ್ತು. ವೈಭವ್ ಜೈನ್ ಮತ್ತು ಅಂಕುಶ್ ಜೈನ್ ಮತ್ತು ಜಾರಿ ನಿರ್ದೇಶನಾಲಯ (ಇಡಿ) ಸೇರಿದಂತೆ ಆರೋಪಿಗಳ ವಾದಗಳನ್ನು ಆಲಿಸಿದ ನಂತರ ನ್ಯಾಯಾಧೀಶರು ಆದೇಶವನ್ನು ಕಾಯ್ದಿರಿಸಿದ್ದರು.



Join Whatsapp