ಮನಿ ಲಾಂಡರಿಂಗ್ ಕೇಸ್ : ಡಿಕೆಶಿ ಇಂದು ಇಡಿ ಕೋರ್ಟ್ ಗೆ ಹಾಜರ್

Prasthutha|

ನವದೆಹಲಿ: ಜಾರಿ ನಿರ್ದೇಶನಾಲಯ ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ , ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು ಇಂದು ಡಿಕೆಶಿ ಇಡಿ ನ್ಯಾಯಾಲಯದ ಮುಂದೆ ಹಾಜರಾಗಲಿದ್ದಾರೆ.

- Advertisement -

ಇ.ಡಿ ಅವರನ್ನು ಬಂಧಿಸಿದ ಮೂರು ವರ್ಷಗಳ ನಂತರ, ಈ ವರ್ಷದ ಮೇ ತಿಂಗಳಲ್ಲಿ ಚಾರ್ಜ್ಶೀಟ್ ಸಲ್ಲಿಸಿತ್ತು.ಅದರ ಆಧಾರದ ಮೇಲೆ ನ್ಯಾಯಾಲಯವು ಜುಲೈ 1 ರಂದು ತನ್ನ ಮುಂದೆ ಹಾಜರಾಗುವಂತೆ ಪ್ರಕರಣದಲ್ಲಿ ಶಿವಕುಮಾರ್ ಗೆ ಸಮನ್ಸ್ ನೀಡಿದೆ. ಮನಿ ಲಾಂಡರಿಂಗ್ ತಡೆ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಾಸಿಕ್ಯೂಷನ್ನ ದೂರನ್ನು ದೆಹಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಇಡಿ ವಿಚಾರಣೆಯ ಸಂಬಂಧಿಸಿದಂತೆ ಈ ವಾರದ ಆರಂಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಿವಕುಮಾರ್, ಮುಂದಿನ ವರ್ಷ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ತಮ್ಮ ವಿರುದ್ಧ ಎಲ್ಲಾ ರಾಜಕೀಯ ಅಸ್ತ್ರಗಳನ್ನು ಬಳಸಲಾಗುತ್ತಿದೆ ಮತ್ತು ಅದೆಲ್ಲವನ್ನೂ ಎದುರಿಸಲು ತಾವು ಸಿದ್ಧ ಎಂದು ಹೇಳಿದ್ದರು.

- Advertisement -

ಶಿವಕುಮಾರ್, ನವದೆಹಲಿಯ ಕರ್ನಾಟಕ ಭವನದ ಉದ್ಯೋಗಿ ಆಂಜನೇಯ ಹನುಮಂತಯ್ಯ ಮತ್ತು ಆತನೊಂದಿಗೆ ನಂಟು ಹೊಂದಿರುವ ಇತರ ವ್ಯಕ್ತಿಗಳ ವಿರುದ್ಧ ಇ.ಡಿ 2018 ರ ಸೆಪ್ಟೆಂಬರ್ ನಲ್ಲಿ ಮನಿ ಲಾಂಡರಿಂಗ್ ಪ್ರಕರಣವನ್ನು ದಾಖಲಿಸಿತ್ತು. 60 ವರ್ಷದ ಶಿವಕುಮಾರ್ ಅವರನ್ನು 2019 ರಲ್ಲಿ ಇಡಿ ಹಲವು ಸುತ್ತಿನ ವಿಚಾರಣೆಯ ನಂತರ ಬಂಧನವನ್ನೂ ಮಾಡಿತ್ತು.

Join Whatsapp