Home ಟಾಪ್ ಸುದ್ದಿಗಳು ಅಕ್ರಮ ಹಣ ವರ್ಗಾವಣೆ ಪ್ರಕರಣ: ಸಂಜಯ್ ರಾವುತ್ ಗೆ ಜಾಮೀನು

ಅಕ್ರಮ ಹಣ ವರ್ಗಾವಣೆ ಪ್ರಕರಣ: ಸಂಜಯ್ ರಾವುತ್ ಗೆ ಜಾಮೀನು

ಮುಂಬೈ: ಪತ್ರಾ ಚಾಲ್ ಭೂ ಅಭಿವೃದ್ಧಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಶಿವಸೇನೆ ಸಂಸದ ಸಂಜಯ್ ರಾವುತ್ ಅವರಿಗೆ ಮುಂಬೈನ ವಿಶೇಷ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದೆ.

ಮನಿ ಲಾಂಡರಿಂಗ್ ತಡೆ ಕಾಯ್ದೆಯಡಿ ಸ್ಥಾಪಿಸಲಾದ ವಿಶೇಷ ನ್ಯಾಯಾಲಯದ ಅಧ್ಯಕ್ಷತೆ ವಹಿಸಿರುವ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎಂ.ಜಿ. ದೇಶಪಾಂಡೆ ಅವರು ಜಾಮೀನು ಆದೇಶವನ್ನು ನವೆಂಬರ್ 9 ರವರೆಗೆ ಕಾಯ್ದಿರಿಸಿದ್ದರು.

ರಾವತ್ ಅವರ ಸಹಚರ ಮತ್ತು ಪ್ರಮುಖ ಆರೋಪಿ ಪ್ರವೀಣ್ ರಾವತ್ ಅವರಿಗೂ ಮುಂಬೈನ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ.

ರಾವುತ್ ಪ್ರಸ್ತುತ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿದ್ದಾರೆ.

ಮುಂಬೈನ ಉಪನಗರ ಗೋರೆಗಾಂವ್ ನ ರೂ.1,034 ಕೋಟಿ ಪತ್ರಾ ಚಾಲ್ ಭೂ ಅಭಿವೃದ್ಧಿಯಲ್ಲಿ ಹಣಕಾಸು ಅಕ್ರಮಗಳಿಗೆ ಸಂಬಂಧಿಸಿದಂತೆ ರಾವತ್ ಅವರನ್ನು ಆಗಸ್ಟ್ 1 ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು.

Join Whatsapp
Exit mobile version