ನಕಲಿ ಪುರಾತನ ವಸ್ತು ವಂಚನೆ ಪ್ರಕರಣ: ಕೇರಳ ಕಾಂಗ್ರೆಸ್ ಅಧ್ಯಕ್ಷ ಇ.ಸುಧಾಕರನ್ ಬಂಧನ

Prasthutha|

ಕೊಚ್ಚಿ: ನಕಲಿ ಪುರಾತನ ವಸ್ತು ವಂಚನೆ ಪ್ರಕರಣದಲ್ಲಿ ಕೇರಳ ಪ್ರದೇಶ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷ ಇ.ಸುಧಾಕರನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೊಳಗಾಗಿ ಕೆಲವೇ ಹೊತ್ತಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

- Advertisement -

ಕಳಮಶ್ಶೇರಿಯಲ್ಲಿರುವ ಅಪರಾಧ ವಿಭಾಗದ ಕಚೇರಿಯಲ್ಲಿ ಏಳೂವರೆ ಗಂಟೆಗಳ ವಿಚಾರಣೆಯ ನಂತರ ಸುಧಾಕರನ್ ಅವರನ್ನು ಶುಕ್ರವಾರ ಬಂಧಿಸಲಾಗಿತ್ತು. ಸುಧಾಕರನ್ ಬಂಧನದ ವಿರುದ್ಧ ವ್ಯಾಪಕ ಪ್ರತಿಭಟನೆ ಕೇರಳದಲ್ಲಿ ನಡೆದಿದ್ದು, ಶನಿವಾರ ಮತ್ತು ಭಾನುವಾರ ರಾಜ್ಯಾದ್ಯಂತ ಪ್ರತಿಭಟನೆಗೆ ಕಾಂಗ್ರೆಸ್ ಕರೆ ನೀಡಿದೆ.

ಮೊನ್ಸನ್ ಮೊದಲ ಆರೋಪಿಯಾಗಿರುವ ಪ್ರಕರಣದಲ್ಲಿ ಸುಧಾಕರನ್ ಎರಡನೇ ಆರೋಪಿಯಾಗಿದ್ದಾರೆ. 50,000 ಮತ್ತು ಅಷ್ಟೇ ಮೊತ್ತದ ಇಬ್ಬರ ಶ್ಯೂರಿಟಿ ನೀಡಿ ಈ ಪ್ರಕರಣದಲ್ಲಿ ಜಾಮೀನು ನೀಡುವಂತೆ ಹೈಕೋರ್ಟ್ ಆದೇಶಿಸಿತ್ತು. ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಸುಧಾಕರನ್ ಹೈಕೋರ್ಟ್‌ನಲ್ಲಿ ಅಫಿಡವಿಟ್ ಕೂಡ ನೀಡಿದ್ದರು. ಡಿವೈಎಸ್ಪಿ ವೈ.ಆರ್.ರುಸ್ತಂ ಪ್ರಸ್ತುತ ಪ್ರಕರಣದ ತನಿಖಾಧಿಕಾರಿಯಾಗಿದ್ದಾರೆ. ಮೂರನೇ ಆರೋಪಿ, ಐಜಿ ಜಿ.ಲಕ್ಷ್ಮಣ್ ಅವರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದರೂ ಅವರ ವಿಚಾರಣೆ ಯಾವಾಗ ಎಂಬುದರ ಬಗ್ಗೆ ಕ್ರೈ ಬ್ರಾಂಚ್ ಮಾಹಿತಿ ನೀಡಿಲ್ಲ ಎಂದು ಮಲಯಾಳ ಮನೋರಮಾ ಪತ್ರಿಕೆ ವರದಿ ಮಾಡಿದೆ.

Join Whatsapp