Home ಕರಾವಳಿ ಮೂಡುಬಿದಿರೆ| ಬೈಕ್ ಅಪಘಾತ; ಸವಾರ ದಾರುಣ ಸಾವು

ಮೂಡುಬಿದಿರೆ| ಬೈಕ್ ಅಪಘಾತ; ಸವಾರ ದಾರುಣ ಸಾವು

ಮೂಡುಬಿದಿರೆ: ಬೈಕ್ ಸ್ಕಿಡ್ ಆಗಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೂಡುಬಿದಿರೆಯ ಬೆಳುವಾಯಿಯಲ್ಲಿ ನಡೆದಿದೆ.

ಮೂಲತಃ ಚಿಕ್ಕಮಗಳೂರಿನ ರಾಜೇಶ್ (28)ಮೃತ  ಯುವಕ.  ಮೂಡುಬಿದಿರೆಯ ರಾಣಿಕೇರಿ ನಿವಾಸಿಯಾಗಿರುವ  ಈತ, ಬಾಳೆಹೊನ್ನೂರಿನಲ್ಲಿ ಅಜ್ಜಿಯ ಅಂತ್ಯಸಂಸ್ಕಾರ ಮುಗಿಸಿ, ಮೂಡುಬಿದಿರೆಗೆ ವಾಪಾಸ್‌ ಹೋಗುವ ವೇಳೆ ಅಪಘಾತ ಸಂಭವಿಸಿದೆ.

ಬೈಕ್‌ ಸ್ಕಿಡ್‌ ಆದ ಪರಿಣಾಮ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ರಸ್ತೆ ಪಕ್ಕದಲ್ಲಿ ಕಡಿದು ಹಾಕಲಾಗಿದ್ದ ಮರಕ್ಕೆ ಡಿಕ್ಕಿ ಹೊಡದಿದೆ. ಗಂಭೀರ ಗಾಯಗೊಂಡು ರಕ್ತಸ್ರಾವದಿಂದ ರಾಜೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Join Whatsapp
Exit mobile version