Home ಕರಾವಳಿ ಮೂಡುಬಿದಿರೆ: ಸಿಡಿಲು ಬಡಿದು ಇಬ್ಬರು ಯುವಕರು ಸ್ಥಳದಲ್ಲೇ ಸಾವು: ಮೂವರು ಗಂಭೀರ

ಮೂಡುಬಿದಿರೆ: ಸಿಡಿಲು ಬಡಿದು ಇಬ್ಬರು ಯುವಕರು ಸ್ಥಳದಲ್ಲೇ ಸಾವು: ಮೂವರು ಗಂಭೀರ

ಮೂಡುಬಿದಿರೆ: ಸಿಡಿಲು ಬಡಿದು ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ಪುತ್ತಿಗೆ ಪಂ.ವ್ಯಾಪ್ತಿಯ ಕಂಚಿಬೈಲು ಅರ್ಬಿ ಪ್ರದೇಶದಲ್ಲಿ ನಡೆದಿದೆ.


ಯಶವಂತ (26) ಮಣಿಪ್ರಸಾದ (25) ಸಿಡಿಲು ಬಡಿದು ಮೃತಪಟ್ಟವರು. ಇನ್ನು ಜತೆಗಿದ್ದ ಮೂವರು ತೀವ್ರವಾಗಿ ಅಸ್ವಸ್ಥರಾಗಿದ್ದು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಇಂದು ಮಧ್ಯಾಹ್ನ ಸುಮಾರು ಒಂದೂವರೆ ತಾಸು ಮೂಡುಬಿದಿರೆ ಪರಿಸರದಲ್ಲಿ ಗಾಳಿ, ಗುಡುಗು, ಸಿಡಿಲು ಸಹಿತ ಭಾರೀ ಮಳೆ ಸುರಿದಿದೆ. ಈ ವೇಳೆ ಭಾರೀ ಸಿಡಿಲು ಅಪ್ಪಳಿಸಿ ಈ ದುರಂತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Join Whatsapp
Exit mobile version