ಮೂಳೂರು – ಮನೆಗೆ ನುಗ್ಗಿ ಮಹಿಳೆಯರ ಮೇಲೆ ಪೊಲೀಸ್ ದೌರ್ಜನ್ಯ, ತಪ್ಪಿತಸ್ಥ ಪೊಲೀಸರ ಅಮಾನತಿಗೆ SDPI ಆಗ್ರಹ

Prasthutha|

ಮಂಗಳೂರು: ಮನೆಯಲ್ಲಿ ಖಾಸಯಿಖಾನೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಪೊಲೀಸರು ಮನೆಯ ಬಾಗಿಲು ಮುರಿದು ಮನೆಗೆ ನುಗ್ಗಿ ಮಹಿಳೆಯರ ಮೇಲೆ ಹಲ್ಲೆ ನಡೆಸಿ, ಮಹಿಳೆಯರ ಬಟ್ಟೆ ಹರಿದು ದೌರ್ಜನ್ಯ ನಡೆಸಿದ ಘಟನೆ ಖಂಡನೀಯ ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಅಧ್ಯಕ್ಷ ನಝೀರ್ ಅಹ್ಮದ್ ತಿಳಿಸಿದ್ದಾರೆ.

- Advertisement -


ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಇಂತಹ ಪೊಲೀಸ್ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಿದ್ದು ಇದರ ಮುಂದುವರಿದ ಭಾಗವಾಗಿ ಇಂದು ಉಡುಪಿಯಲ್ಲಿ ಈ ಘಟನೆ ನಡೆದಿದೆ. ಇಂದಿನ ಘಟನೆಯಲ್ಲಿ ತಪ್ಪಿತಸ್ಥ ಪೊಲೀಸರನ್ನು ಅಮಾನತುಗೊಳಿಸಬೇಕು ಹಾಗೂ ಅವರ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪೊಲೀಸ್ ದೌರ್ಜನ್ಯದಿಂದ ಗಾಯಗೊಂಡವರು ಉಡುಪಿಯ ಅಜ್ಜರ ಕಾಡು ಆಸ್ಪತ್ರೆಯಲ್ಲಿ ದಾಖಲಾಗಿದ್ದು ಅವರನ್ನು S D P I ಜಿಲ್ಲಾ ನಿಯೋಗ ಭೇಟಿ ಮಾಡಿ ಸಾಂತ್ವನ ನೀಡಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Join Whatsapp