ಶವಾಗಾರ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳಿಗೆ 75 ನೇ ಸ್ವಾತಂತ್ರ್ಯೋತ್ಸವದ ಆಚರಣೆಯಲ್ಲಿ ವಿಶೇಷ ಅತಿಥಿಗಳಾಗಿ ಆಹ್ವಾನ

Prasthutha|

ನವದೆಹಲಿ: ಬೀದಿ ಬದಿ ವ್ಯಾಪಾರಿಗಳು, ಶವಾಗಾರದ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತರು ಮತ್ತು ಮುದ್ರಾ ಯೋಜನೆ ಸಾಲಗಾರರು 75 ನೇ ಸ್ವಾತಂತ್ರ್ಯೋತ್ಸವದ ಆಚರಣೆಯಲ್ಲಿ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ತಿಳಿಸಿದ್ದಾರೆ.

- Advertisement -

75 ನೇ ಸ್ವಾತಂತ್ರ್ಯ ದಿನಾಚರಣೆಯ ಆಚರಣೆಯ ವಿಶೇಷ ಉಪಕ್ರಮದ ಬಗ್ಗೆ ಮಾತನಾಡಿದ ಅವರು, ಮೊದಲ ಬಾರಿಗೆ ದೇಶೀಯ ವಿನ್ಯಾಸಗೊಳಿಸಿದ ಮತ್ತು ಅಭಿವೃದ್ಧಿಪಡಿಸಿದ ಎಟಿಎಜಿಎಸ್ ಬಂದೂಕುಗಳನ್ನು  ಸೆಲ್ಯೂಟ್ ಗಾಗಿ ಬಳಸಲಾಗುವುದು ಎಂದು ಬಹಿರಂಗಪಡಿಸಿದರು.

ಮಾರಿಷಸ್, ಅರ್ಜೆಂಟೈನಾ, ಸೀಶೆಲ್ಸ್, ಯುಎಇ, ಮೊಜಾಂಬಿಕ್, ಫಿಜಿ, ಯುಎಸ್ಎ, ಯುಕೆ, ಇಂಡೋನೇಷ್ಯಾ, ಮಾಲ್ಡೀವ್ಸ್, ನೈಜೀರಿಯಾ, ಬ್ರೆಜಿಲ್, ಉಜ್ಬೇಕಿಸ್ತಾನ್ ಮತ್ತು ಕಿರ್ಗಿಸ್ತಾನ್ ಸೇರಿದಂತೆ 14 ದೇಶಗಳ ಕೆಡೆಟ್ ಗಳನ್ನು ಸ್ವಾತಂತ್ರ್ಯ ದಿನಾಚರಣೆಗೆ ಸಾಕ್ಷಿಯಾಗಲು ಆಹ್ವಾನಿಸಲಾಗಿದೆ ಎಂದು ಅವರು ಹೇಳಿದರು.

Join Whatsapp