ಪುತ್ತೂರು| ತಾಯಿಗೆ ಹಾವು ಕಡಿತ: ಬಾಯಿಯಿಂದ ವಿಷ ಹೊರ ತೆಗೆದು ಮರು ಜನ್ಮ ನೀಡಿದ ಮಗಳು

Prasthutha|

ಪುತ್ತೂರು: ತಾಯಿಗೆ ವಿಷದ ಹಾವು ಕಚ್ಚಿದಾಗ ಮಗಳು ಆ ವಿಷವನ್ನು ಬಾಯಿಯಿಂದ ಹೊರ ತೆಗೆದು ರಕ್ಷಿಸಿದ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಎಟ್ಯಡ್ಕ ಎಂಬಲ್ಲಿ ವಾರದ ಹಿಂದೆ ಈ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

- Advertisement -


ಸಾಹಸ ಮೆರೆದ ಯುವತಿಗೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.


ಮಮತಾ ಎಸ್. ರೈ ಅವರಿಗೆ ಮನೆಯ ತೋಟದಲ್ಲಿ ನಾಗರಹಾವು ಕಚ್ಚಿತ್ತು. ಈ ವೇಳೆ ಸಮಯ ಪ್ರಜ್ಞೆ ಮೆರೆದ ಮಗಳು ಶ್ರಮ್ಯ ರೈ ಕೂಡಲೇ ಹಾವು ಕಚ್ಚಿದ ಜಾಗಕ್ಕೆ ಬಾಯಿಯಿಟ್ಟು ವಿಷ ಪೂರಿತ ರಕ್ತವನ್ನು ಚೀಪಿ ಹೊರ ತೆಗೆದು ವಿಷಪ್ರಸರಣ ಆಗದಂತೆ ನೋಡಿಕೊಂಡಿದ್ದಾರೆ. ಈ ಮೂಲಕ ತಾಯಿಯ ಜೀವಕ್ಕೆ ಮರು ಜನ್ಮ ನೀಡಿದ್ದಾರೆ.

- Advertisement -


ಮಮತಾ ರೈ ಕೆಯ್ಯೂರು ಗ್ರಾಪಂ ಸದಸ್ಯೆಯಾಗಿದ್ದು, ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಪುತ್ರಿ ಶ್ರಮ್ಯ ರೈ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ದ್ವಿತೀಯ ಬಿಸಿಎ ಓದುತ್ತಿದ್ದಾರೆ.

Join Whatsapp