ಮೂವರು ಪುತ್ರಿಯರನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ

Prasthutha|

ಬಾಗಲಕೋಟೆ: ತನ್ನ ಮೂವರು ಪುತ್ರಿಯರನ್ನು ವಿಷವುಣಿಸಿ ಕೊಂದು ತಾಯಿಯೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬಾಗಲಕೋಟೆ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ.

- Advertisement -


ಮೃತಪಟ್ಟವರನ್ನು ತಾಯಿ ರೇಖಾ ಬಗಲಿ(28), ಮಕ್ಕಳಾದ ಸನ್ನಿಧಿ (7), ಸಮೃದ್ಧಿ(4), ಶ್ರೀನಿಧಿ(2) ಎಂದು ಗುರುತಿಸಲಾಗಿದೆ.


ರೇಖಾ ಅವರು ಮಾವಿನಹಣ್ಣಿನ ರಸದಲ್ಲಿ ರಾಸಾಯನಿಕ ಬೆರೆಸಿ ಮಕ್ಕಳಿಗೆ ಕುಡಿಸಿ ಬಳಿಕ ತಾನೂ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನಗೆ ಮೂರು ಜನ ಹೆಣ್ಣು ಮಕ್ಕಳಿದ್ದ ಕಾರಣ ಮಕ್ಕಳ ಲಾಲನೆ ಪಾಲನೆ ಬಗೆಗಿನ ಚಿಂತೆ ರೇಖಾ ಅವರಿಗೆ ಇತ್ತು ಎನ್ನಲಾಗಿದೆ. ಇದರಿಂದಾಗಿ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದರು. ಹಾಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

- Advertisement -


ಸ್ಥಳಕ್ಕೆ ಆಗಮಿಸಿದ ಬಾಗಲಕೋಟೆ ಗ್ರಾಮೀಣ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Join Whatsapp