Home ಟಾಪ್ ಸುದ್ದಿಗಳು ಕೊಟ್ಟ ಸಾಲ ಕೇಳಿದ್ದಕ್ಕೆ ಅಪಪ್ರಚಾರ: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ !

ಕೊಟ್ಟ ಸಾಲ ಕೇಳಿದ್ದಕ್ಕೆ ಅಪಪ್ರಚಾರ: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ !

ಶಿವಮೊಗ್ಗ: ಕೊಟ್ಟ ಸಾಲದ ಹಣ ಮರಳಿಸುವಂತೆ ಕೇಳಿದ್ದಕ್ಕೆ ಸಾಲ ಪಡೆದವರು ಅಕ್ರಮ ಸಂಬಂಧದ ಪಟ್ಟ ಕಟ್ಟಿದ್ದರು. ಇದರಿಂದ ಮನನೊಂದ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಭದ್ರಾವತಿ ತಾಲೂಕಿನ ಯಡೇಹಳ್ಳಿಯ ನಿವಾಸಿ ವೀಣಾ , 7 ವರ್ಷದ ಮಗಳಾದ ಜ್ಞಾನವಿ ಹಾಗೂ ಒಂದು ವರ್ಷದ ದೈವಿಕಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ವೀಣಾ ಹಾಗೂ ಸಂತೋಷ್ ದಂಪತಿಯು ಭದ್ರಾವತಿ ತಾಲೂಕಿನ ಅರಹತೋಳಲು ಗ್ರಾಮದ ಸಂತೋಷ ಹಾಗೂ ಆಶಾ ಎಂಬುವರಿಗೆ 8 ಲಕ್ಷ ರೂ. ಸಾಲ ನೀಡಿದ್ದರು. ಈ ಸಾಲ ವಾಪಸ್ ನೀಡುವಂತೆ ಕೇಳಿದ್ದಕ್ಕೆ ಆಶಾ ಹಾಗೂ ಸಂತೋಷ್ ದಂಪತಿಯು ವೀಣಾ ಅಕ್ರಮ‌ ಸಂಬಂಧ ಹೊಂದಿದ್ದಾರೆ ಎಂದು ಅಪಪ್ರಚಾರ ನಡೆಸಿದ್ದಾರೆ ಎನ್ನಲಾಗಿದೆ.

ಹೀಗೆ ಅಪಪ್ರಚಾರ ಮಾಡದಂತೆ ಕೇಳಿಕೊಂಡರೂ‌ ಆಶಾ ದಂಪತಿ ಅದನ್ನೇ ಮುಂದುವರೆಸಿದ್ದಾರೆ. ಇದರಿಂದ ಮನನೊಂದು ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಮೃತ ವೀಣಾ ಪತಿ ಸಂತೋಷ್ ನೀಡಿದ ದೂರಿನ ಮೇರೆಗೆ ಅರಹತೋಳಲು ಗ್ರಾಮದ ಸಂತೋಷ್(35) ನನ್ನು ಹೊಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ. ಆದರೆ ಆಶಾ ಪರಾರಿಯಾಗಿದ್ದಾಳೆ.

Join Whatsapp
Exit mobile version