Home ಟಾಪ್ ಸುದ್ದಿಗಳು ಬೈಕ್’ಗೆ ಕಾರು ಡಿಕ್ಕಿ: ತಾಯಿ- ಮಗ ಸಾವು, ಮಗಳು-ಅಳಿಯ ಗಂಭೀರ

ಬೈಕ್’ಗೆ ಕಾರು ಡಿಕ್ಕಿ: ತಾಯಿ- ಮಗ ಸಾವು, ಮಗಳು-ಅಳಿಯ ಗಂಭೀರ

ರಾಯಚೂರು: ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದು ಬೈಕ್’ನಲ್ಲಿದ್ದ ತಾಯಿ- ಮಗ ಸ್ಥಳದಲ್ಲೇ ಮೃತಪಟ್ಟರೆ, ಅಳಿಯ ಮತ್ತು ಮಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಳೆದ ರಾತ್ರಿ ಲಿಂಗಸೂಗೂರು ತಾಲೂಕಿನ ಮುದಗಲ್ ಹತ್ತಿರ ಸಂಭವಿಸಿದೆ.


ಮಸ್ಕಿ ತಾಲೂಕಿನ ಯರದೊಡ್ಡಿ ಗ್ರಾಮದ ಭಾರತಿ(29), ಉದಯಶಂಕರ(11) ಮೃತರು. ಮಗಳು ಪೂಜಾ ಹಾಗೂ ಅಳಿಯ ಪರಮೇಶಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.


ಭಾರತಿ ಅವರ ಮಕ್ಕಳು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಿಯಮ್ಮನಹಳ್ಳಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಹೀಗಾಗಿ ಬೈಕ್’ನಲ್ಲಿ ಶಾಲೆಗೆ ಬಿಡಲು ತೆರಳುತ್ತಿದ್ದರು. ಈ ನಡುವೆ ಇಲಕಲ್ ಕಡೆಯಿಂದ ಬರುತ್ತಿದ್ದ ಕಾರು ಇವರಿದ್ದ ಬೈಕ್’ಗೆ ಡಿಕ್ಕಿ ಹೊಡೆದಿದೆ.


ಗಾಯಾಳುಗಳನ್ನು ಬಾಗಲಕೋಟೆಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಮುದಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಳಿಯ ಪರಮೇಶ ಅವರ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತಕ್ಕೆ ಕಾರಣವಾದ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಕಾರು ಮಾಲೀಕರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

Join Whatsapp
Exit mobile version