ಪ್ರಚೋದನಕಾರಿ ಭಾಷಣಗಳ ಸರದಾರ ಸಂಸದ ಅನಂತ್ ಕುಮಾರ್ ಹೆಗಡೆ ಆರೋಗ್ಯದಲ್ಲಿ ಏರುಪೇರು, ಶಸ್ತ್ರ ಚಿಕಿತ್ಸೆ

Prasthutha|

- Advertisement -

ಬೆಂಗಳೂರು : ತಮ್ಮ ಪ್ರಚೋದನಕಾರಿ ಭಾಷಣಗಳಿಂದಲೇ ಸುದ್ದಿಯಲ್ಲಿದ್ದ ಉತ್ತರ ಕನ್ನಡದ ಬಿಜೆಪಿ ಸಂಸದ ಅನಂತಕುಮಾರ ಹೆಗಡೆಯವರು ರಾಜಕೀಯಕ್ಕೆ ವಿದಾಯ ಹೇಳಲು ಮುಂದಾಗಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಅನಂತ್ ಕುಮಾರ್ ಹೆಗಡೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಸದ್ಯ ಅವರು ತೀವ್ರವಾದ ಬೆನ್ನು ನೋವು ಹಾಗೂ ಕಾಲುನೋವಿನ ಶಸ್ತ್ರಕ್ರಿಯೆಗೆ ಒಳಗಾಗಿದ್ದರಿಂದ ಅವರಿಗೆ ಹೆಚ್ಚಿನ ಸಮಯ ವಿಶ್ರಾಂತಿ ಬೇಕು ಎನ್ನಲಾಗಿದೆ.

ಬೆನ್ನುನೋವು ಮತ್ತು ಕಾಲು ನೋವು ಉಲ್ಬಣವಾದ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಅವರು ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ವಿಶ್ರಾಂತಿಯಲ್ಲಿರುವ ಅವರು ರಾಜಕೀಯ ನಿವೃತ್ತಿ ಹೊಂದುವ ಚಿಂತನೆಯಲ್ಲಿದ್ದಾರೆ ಎಂದು ಹೇಳಲಾಗಿದೆ.

Join Whatsapp