ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಆಪ್ತ ಕಾರ್ಯದರ್ಶಿ ಕೋವಿಡ್ ಗೆ ಬಲಿ !

Prasthutha|

ಚಾಮರಾಜನಗರ ಸಂಸದ ವಿ. ಶ್ರೀನಿವಾಸ ಪ್ರಸಾದ್ ಆಪ್ತ ಕಾರ್ಯದರ್ಶಿ ಶಂಕರ್ ಕೊರೊನಾ ಸೋಂಕಿಗೆ ತುತ್ತಾಗಿ ನಿಧನ ಹೊಂದಿದ್ದಾರೆ. ಚಿಕಿತ್ಸೆ ಫಲಿಸದೆ ಖಾಸಗಿ ಆಸ್ಪತ್ರೆಯಲ್ಲಿ ಶಂಕರ್(78) ಕೊನೆಯುಸಿರೆಳೆದಿದ್ದಾರೆ. ಕಳೆದ 40 ವರ್ಷಗಳಿಂದ ಶ್ರೀನಿವಾಸ್ ಪ್ರಸಾದ್ ಬಳಿ ಆಪ್ತ ಸಹಾಯಕರಾಗಿದ್ದ ಶಂಕರ್ ಅವರಿಗೆ ಒಂದು ವಾರದ ಹಿಂದೆ ಕೊವಿಡ್-19 ಸೋಂಕು ಕಾಣಿಸಿಕೊಂಡಿತ್ತು. ಬಳಿಕ, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಶಂಕರ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

- Advertisement -

ಎರಡು ದಿನಗಳ ಹಿಂದಷ್ಟೇ ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಆಪ್ತ ಸಹಾಯಕ ಕೂಡಾ ಕೋವಿಡ್ ಗೆ ಬಲಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

Join Whatsapp