Home ಟಾಪ್ ಸುದ್ದಿಗಳು ಫುಟ್‌ ಪಾತ್‌ ನಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಕಾರು ಹರಿಸಿ ಹತ್ಯೆ: ಸಂಸದನ ಪುತ್ರಿಗೆ ಜಾಮೀನು!

ಫುಟ್‌ ಪಾತ್‌ ನಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಕಾರು ಹರಿಸಿ ಹತ್ಯೆ: ಸಂಸದನ ಪುತ್ರಿಗೆ ಜಾಮೀನು!

ಚೆನ್ನೈ: ರಾಜ್ಯಸಭಾ ಸಂಸದರ ಮಗಳು ಪಾದಚಾರಿ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ತನ್ನ ಕಾರು ಹರಿಸಿ, ಆತ ಮೃತಪಟ್ಟಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.

ಹಿಟ್‌ ಆ್ಯಂಡ್​ ರನ್ ಪ್ರಕರಣದಲ್ಲಿ ರಾಜ್ಯಸಭಾ ಸಂಸದರ ಪುತ್ರಿಗೆ ಜಾಮೀನು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆಂಧ್ರಪ್ರದೇಶದ ವೈಎಸ್‌ಆರ್‌ಸಿಪಿ ಸಂಸದ ಬೀಡಾ ಮಸ್ತಾನ್ ರಾವ್ ಅವರ ಪುತ್ರಿ ಮಾಧುರಿ ತಮ್ಮ ಸ್ನೇಹಿತರೊಟ್ಟಿಗೆ ಬಿಎಂಡಬ್ಲ್ಯೂ ಕಾರಿನಲ್ಲಿ ತೆರಳುತ್ತಿದ್ದಾಗ ಫುಟ್‌ ಪಾತ್‌ ನಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಕಾರು ಹತ್ತಿಸಿದ್ದಾರೆ, ಈ ವೇಳೆ ಕುಡಿದ ಮತ್ತಿನಲ್ಲಿದ್ದರು ಎಂದು ಮೂಲಗಳು ತಿಳಿಸಿವೆ.

ಮೃತ ಸೂರ್ಯ 8 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಎನ್ನಲಾಗಿದೆ. ಘಟನೆ ನಂತರ ಸ್ಥಳೀಯರು ಜೆ-5 ಶಾಸ್ತ್ರಿನಗರ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿ, ಕ್ರಮಕ್ಕೆ ಒತ್ತಾಯಿಸಿದ್ದರು. ಬಳಿಕ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದಾಗ, ಅಪಘಾತ ಮಾಡಿದ ಕಾರು ರಾಜ್ಯಸಭಾ ಸಂಸದ ಬೀಡಾ ಮಸ್ತಾನ್ ರಾವ್ ಅವರಿಗೆ ಸೇರಿದ್ದು, ಈ ಕಾರು ಪುದುಚೇರಿಯಲ್ಲಿ ನೋಂದಣಿಯಾಗಿದೆ ಎಂಬುದು ಗೊತ್ತಾಗಿದೆ. ನಂತರ ಅಪಘಾತ ಎಸಗಿದ ಮಾಧುರಿಯನ್ನು ಪೊಲೀಸರು ಬಂಧಿಸಿದ್ದರು, ಆದರೆ ಪೊಲೀಸ್ ಠಾಣೆಯಲ್ಲಿಯೇ ಜಾಮೀನು ನೀಡಲಾಯಿತು ಎಂದು‌ ತಿಳಿದು‌ ಬಂದಿದೆ.

Join Whatsapp
Exit mobile version