ಮನೆ ಮೇಲೆ ಮಣ್ಣು ಕುಸಿತ; ಅವಶೇಷಗಳಡಿಯಲ್ಲಿ ಸಿಲುಕಿದ ನಾಲ್ವರು

Prasthutha|

ಭಟ್ಕಳ: ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಗುಡ್ಡದ ಮೇಲಿನಿಂದ ಭಾರಿ ಪ್ರಮಾಣದ ಮಣ್ಣು ಕುಸಿದ ಪರಿಣಾಮ, ಮನೆ ಸಂಪೂರ್ಣ ನಾಶವಾಗಿ ನಾಲ್ವರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಮುಟ್ಟಳ್ಳಿಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.

- Advertisement -

ಮನೆಯಲ್ಲಿದ್ದ ಲಕ್ಷ್ಮಿ ನಾರಾಯಣ ನಾಯ್ಕ (48), ಲಕ್ಷ್ಮಿ ನಾಯ್ಕ (33), ಅನಂತ ನಾರಾಯಣ ನಾಯ್ಕ (32) ಪ್ರವೀಣ ಬಾಲಕೃಷ್ಣ ನಾಯ್ಕ (20) ಮಣ್ಣಿನಡಿಯಲ್ಲಿ ಸಿಲುಕಿಕೊಂಡವರು. ಸ್ಥಳದಲ್ಲಿ ರಕ್ಷಣಾ ಕಾರ್ಯ ಆರಂಭವಾಗಿದೆ ಎಂದು ತಿಳಿದುಬಂದಿದೆ.

Join Whatsapp